Site icon Suddi Belthangady

ಉಜಿರೆ: ಎಸ್ ಡಿ ಎಂ ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ ಎಸ್ ಡಿ ಎಂ ನೆನಪಿನಂಗಳ ವಾರ್ಷಿಕ ಪುನರ್ಮಿಲನ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು( ಸ್ವಾಯತ್ತ) ಉಜಿರೆ ಇದರ ಹಳೆ ವಿದ್ಯಾರ್ಥಿಗಳ ಸಂಘ ಆಯೋಜಿಸಿರುವ ಎಸ್ ಡಿ ಎಂ ನೆನಪಿನಂಗಳ ವಾರ್ಷಿಕ ಕಾರ್ಯಕ್ರಮ ಉಜಿರೆಯ ಆಡಿಟೋರಿಯಂ ನಲ್ಲಿ ಉದ್ಘಾಟನೆಗೊಂಡಿತು.

ಎಸ್ ಡಿ ಎಂ ಹಿರಿಯ ವಿದ್ಯಾರ್ಥಿಗಳ ಸಂಘ ಬೆಂಗಳೂರಿನ ಅಧ್ಯಕ್ಷರಾಗಿರುವ ಎನ್ ಸತ್ಯನಾರಾಯಣ ಹೊಳ್ಳರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಹಿರಿಯ ವಿದ್ಯಾರ್ಥಿ ಸಂಘದಿಂದ ವಿದ್ಯಾರ್ಥಿಗಳ ಮಧ್ಯಾಹ್ನದ ಊಟಕ್ಕೆ 5ಲಕ್ಷ ರೂಪಾಯಿಯ ಚೆಕ್ ಸಮರ್ಪಣೆ ಮಾಡಲಾಯಿತು.

ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಬ್ಬರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್, ಪ್ರಾಂಶುಪಾಲ ಡಾ.ಬಿ.ಎ.ಕುಮಾರ್ ಹೆಗ್ಡೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿತಾಂಬರ ಹೆರಾಜೆ, ಕಾರ್ಯಕ್ರಮ ಸಂಯೋಜಕ ಡಾ.ಎಂ.ಪಿ.ಶ್ರೀನಾಥ್ ಉಪಸ್ಥಿತರಿದ್ದರು. ಡಾ. ದಿವಾಕರ ಕೆ ಮತ್ತು ದಿವ್ಯಾ ಕುಮಾರಿ ಕಾರ್ಯಕ್ರಮ ನಿರೂಪಣೆ ಮಾಡಿದರು.

Exit mobile version