ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಮೊಗ್ರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂದಿರ ಊoತನಾಜೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಸ್ವಚ್ಛತಾ ಶ್ರಮದಾನದ ಮೂಲಕ ಭಜನಾ ಮಂದಿರದ ಆವರಣದ ಸುತ್ತಲೂ ಬೆಳೆದಿದ್ದ ಕಳೆ ಗಿಡಗಳನ್ನು ತೆಗೆದು ಸ್ವಚ್ಛಗೊಳಿಸುವ ಕಾರ್ಯ ಆಗಸ್ಟ್ 25ರಂದು ನಡೆಸಲಾಯಿತು.

ಈ ಸ್ವಚ್ಛತಾ ಕಾರ್ಯದಲ್ಲಿ ಮೊಗ್ರು ಒಕ್ಕೂಟದ ಸದಸ್ಯರು, ಸೇವಾಪ್ರತಿನಿಧಿ ಚಂದ್ರಕಲಾ ಭಾಗವಹಿಸಿದರು. ಭಜನಾ ಮಂಡಳಿ ಅಧ್ಯಕ್ಷ ಸೀತರಾಮ ಗೌಡ, ಉಪ್ಪ ರವರು ಸ್ವಚ್ಛತಾ ಸೇವಾಕಾರ್ಯದಲ್ಲಿ ಭಾಗಿಯಾದವರೆಲ್ಲರಿಗೂ ಧನ್ಯವಾದ ಸಲ್ಲಿಸಿದರು.

LEAVE A REPLY

Please enter your comment!
Please enter your name here