Site icon Suddi Belthangady

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ -ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

ಬೆಳ್ತಂಗಡಿ: ಕೇರಳದ ಕೊಟ್ಟಯಂ ಜಿಲ್ಲೆಯ ಪಾಲ ಸೆಂಟ್ ಅಲ್ಫೋನ್ಸಿಯನ್ ಸೆಂಟರ್ ನಲ್ಲಿ ನಡೆದ ಜಾಗತಿಕ ಸೀರೋ ಮಲಬಾರ್ ಧರ್ಮ ಸಭೆಯ ಐದನೇ ಜಾಗತಿಕ ಧರ್ಮ ಸಂಸದ್ ನಲ್ಲಿ ಸೀರೋ ಮಲಬಾರ್ ಧರ್ಮ ಸಭೆಯ ಸುಮಾರು ಐದು ಭೂಖಂಡಗಳ ಹದಿನಾರು ದೇಶಗಳ ಮೂವತ್ತಾಯಿದು ಧರ್ಮ ಪ್ರಾಂತ್ಯಗಳ ಆಯ್ದ 348 ಮಂದಿ ಪ್ರತಿನಿದಿಗಳ ಸಮ್ಮೇಳನವು ಆಗಸ್ಟ್ 22ರಿಂದ 25ರವರೆಗೆ ಅತ್ಯಂತ ಯಶಸ್ವಿಯಾಗಿ ನಡೆಯಿತು.

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರ ಮತ್ತು ಪಶು ಸಂಗೋಪನಾ ಸಚಿವ ಜೋರ್ಜ್ ಕುರಿಯನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಬೆಳ್ತಂಗಡಿ ಧರ್ಮ ಪ್ರಾಂತ್ಯದಿಂದ ಧರ್ಮಾಧ್ಯಕ್ಷ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ, ವಿಕಾರ್ ಜೆನೆರಲ್ ಅತಿ ವಂದನಿಯ ಫಾ.ಜೋಸ್ ವಲಿಯಪರಂಭಿಲ್, ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ.ಶಾಜಿ ಮಾತ್ಯು ಕ್ಯಾಥೋಲಿಕ್ ಯೂನಿಯನ್ ನಿಕಟ ಪೂರ್ವ ಅಧ್ಯಕ್ಷರು ಧರ್ಮ ಪ್ರಾಂತಿಯ ಪಾಲನ ಸಮಿತಿ ಯ ಸದಸ್ಯರು ಹಿರಿಯ ವಕೀಲರು ಆದ ಸೇವಿಯಾರ್ ಪಾಲೇಲಿ, ಧರ್ಮಪ್ರಾಂತ್ಯದ ಕೇಂದ್ರ ಪಾಲನ ಸಮಿತಿಯ ಸದಸ್ಯರು ಎಕೆಸಿಸಿ ಜಾಗತಿಕ ಕಾರ್ಯದರ್ಶಿಗಳಲ್ಲಿ ಓರ್ವರಾದ ಜೈಸನ್ ಪಟ್ಟೀರಿ, ಮಾತೃ ವೇದಿಕೆ ಧರ್ಮ ಪ್ರಾಂತಿಯ ಅಧ್ಯಕ್ಷೆ ಮೆರ್ಸಿ ಚಾಕೋ ಬಜಗೋಳಿ, ಮಡಂತ್ಯಾರು ಕಾಲೇಜಿನ ಪ್ರಾದ್ಯಪಕ ಅಲ್ವಿನ್ ಕೊಚ್ಚು ಪುರಕಲ್ ವೇಣೂರು ಭಾಗವಹಿಸಿದರು.

ಈ ಕಾರ್ಯಕ್ರಮವು ಸೀರೋ ಮಲಬಾರ್ ಸಭೆಯ ಭವಿಷ್ಯದ ಮಾರ್ಗದರ್ಶನಕ್ಕಾಗಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲು ವೇದಿಕೆ ಒದಗಿಸಿತು, ಮತ್ತು ಪ್ರತಿನಿಧಿಗಳಿಂದ ಅತ್ಯಧಿಕ ಸಹಕಾರವನ್ನು ಪಡೆದಿತು.

Exit mobile version