Site icon Suddi Belthangady

ಬಳ್ಳಮಂಜ: ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

ಬಳ್ಳಮಂಜ: ನ್ಯೂ ಫ್ರೆಂಡ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಆ.26ರಂದು ಸಾರ್ವಜನಿಕ ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಆಡಳಿತ ಮುಕ್ತೇಸರ ಹರ್ಷ ಸಂಪಿಗೆತ್ತಾಯ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಗೋಪಾಲ್ ಪೂಜಾರಿ ಕೋಲಾಜೆ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ನಾರಾಯಣ ಪೂಜಾರಿ ಅವರು ಸಭಾ ಅಧ್ಯಕ್ಷ ಸ್ಥಾನ ವಹಿಸಿದ್ದರು. ಲ್ಯಾನ್ಸಿ ಪಾಯಿಸ್ ಸ್ವಾಗತಿಸಿ, ಧನ್ಯವಾದ ನೀಡಿದರು.ನಂತರ ವಿವಿಧ ಕ್ರೀಡಾಕೂಟ ನಡೆಯಿತು.

ಸಂಜೆ ಬೈಕ್ ರೇಸ್, ಹಗ್ಗಜಗಾಟ ,ಗೋವಿಂದ ಸ್ಪರ್ಧೆ ಹಾಗೂ ವಿಶೇಷ ಆಕರ್ಷಣೆಯಾಗಿ ಬಳ್ಳಮಂಜ ಪೇಟೆಯಿಂದ ಹಟ್ಟಿ ಗೋವಿಂದ ಕೃಷ್ಣ ನೀಲೋತ್ಸವ ನೀರ ಓಕುಳಿ ಆಟದೊಂದಿಗೆ ಕ್ರೀಡಾಂಗಣಕ್ಕೆ ಭವ್ಯ ಮೆರವಣಿಗೆ ನಡೆಯಿತು.ಸಂಜೆ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಪದ್ಮರಾಜ್ ಆರ್ ಪೂಜಾರಿ ಮಂಗಳೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಟಿ.ವಿ ಶ್ರೀಧರ್ ರಾವ್ ಪೇಜಾವರ ಪಾರೆಂಕಿ, ರೋಟರಿ ಕ್ಲಬ್ ಇದರ ಅಧ್ಯಕ್ಷ ನಿತ್ಯಾನಂದ ಬಿ., ಹೆಜ್ಜಾರು ಚಲನಚಿತ್ರ ನಟ ಭಗತ್ ಆಳ್ವಾ, ದೀಪಕ್ ಕೋಟ್ಯಾನ್ ಸುಂಕದಕಟ್ಟೆ, ಪೆರ್ಮುಡ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಹೆಚ್ ಕೋಟ್ಯಾನ್, ಜಿ ಆರ್ ಬಾರ್ ಮಾಲೀಕ ರಾಘವೇಂದ್ರ ಪ್ರಸಾದ್, ಲಿಯೊ ರೋಡ್ರಿಗಸ್, ಉದ್ಯಮಿ ಆಕಾಶ್, ಎಚ್.ಪ್ರವೀಣ್, ಅಶೋಕ್ ನಾವುಡ, ಸೀತಾರಾಮ್ ಬಂಗೇರ ಇವರು ಉಪಸ್ಥಿತರಿದ್ದರು.

ನಂತರ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಸಂಘದ ಅಧ್ಯಕ್ಷ ನಾರಾಯಣ ಪೂಜಾರಿ, ಕಾರ್ಯದರ್ಶಿ ನಿಶಾಂತ್, ಕೋಶಾಧಿಕಾರಿ ಶ್ರವಣ್, ಗೌರವ ಸಲಹೆಗಾರರಾದ ಪ್ರಮೋದ್ ಕುಮಾರ್, ಲ್ಯಾನ್ಸಿ ಪಾಯಿಸ್, ಹರ್ಷ ಬಳ್ಳಮಂಜ, ಸದಾಶಿವ ಹೆಗ್ಡೆ, ಜಯರಾಮ್, ಸಂದೀಪ್ ಕುಂದರ್ ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.

ಪ್ರೌಢಶಾಲೆಯಲ್ಲಿ ಕಲಿಕೆ ಹಾಗೂ ಕ್ರೀಡೆ ಕೋಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.ಸಂಘ ಪ್ರಾರಂಭದಿಂದ 30ನೇ ವರ್ಷದವರೆಗೂ ಅಧ್ಯಕ್ಷರಾಗಿದ್ದ ಅಧ್ಯಕ್ಷರುಗಳಿಗೆ ಗೌರವಿಸಲಾಯಿತು.ಪ್ರಮೋದ್ ಕುಮಾರ್ ಸ್ವಾಗತಿಸಿ, ಸದಾಶಿವ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ, ಹರ್ಷ ಬಳ್ಳಮಂಜ ಧನ್ಯವಾದ ಕೋರಿದರು.

Exit mobile version