Site icon Suddi Belthangady

ಬಂದಾರು: ಮೈರೋಳ್ತಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ಶ್ರೀ ಕ್ಷೇತ್ರದ ಧರ್ಮದರ್ಶಿಗಳ ಹುಟ್ಟು ಹಬ್ಬದ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ಮತ್ತು ಚಾಮುಂಡೇಶ್ವರಿ ಯುವಕ ಮಂಡಲ ಇದರ ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ಶ್ರೀ ಕ್ಷೇತ್ರದ ಧರ್ಮದರ್ಶಿಗಳ ಹುಟ್ಟು ಹಬ್ಬದ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸಾರ್ವಜನಿಕರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆ, ಕಲ್ಲೇರಿ ಮೆಸ್ಕಾಂ ನಲ್ಲಿ ಪವರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿ ಮಂಗಳೂರಿಗೆ ಪದೋನ್ನತಿ ಪಡೆದಿರುವ ಸಂದೀಪ್ ಎಂ ಇವರಿಗೆ ಸನ್ಮಾನ, ಶ್ರೀ ಕೃಷ್ಣ ದೇವರಿಗೆ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಿತು.

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಹಾಗೂ ಶ್ರೀ ಕ್ಷೇತ್ರದ ಧರ್ಮದರ್ಶಿಗಳಾದ ಆನಂದ ಗೌಡರ ದಿವ್ಯಹಸ್ತದಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ಕ್ಷೇತ್ರದ ಭಕ್ತಾಧಿಗಳು ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಯುವಕ ಮಂಡಲ ಪದಾಧಿಕಾರಿಗಳು, ಸರ್ವ ಸದಸ್ಯರು, ಶ್ರೀ ಕ್ಷೇತ್ರದ ಮನೆಯವರು ಸಹಕರಿಸಿದರು.

Exit mobile version