Site icon Suddi Belthangady

ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಅಭಿನಂದನೆ

ಕೊಯ್ಯೂರು: ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಸದಸ್ಯರಾಗಿ ನಂತರ ಹಲವಾರು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಪ್ರಸ್ತುತ ಭಜನಾ ಮಂಡಳಿಯ ಗೌರವ ಸಲಹೆಗಾರರಾಗಿ ಊರಿನ ವಿವಿಧ ಸಂಘಟನೆಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡು ಲಾಯಿಲ ವಲಯದ ಭಜನಾ ಪರಿಷತ್ತಿನ ಸಂಯೋಜಕರಾಗಿ ಅಧ್ಯಕ್ಷರಾಗಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿಯಾಗಿ ತಾಲೂಕು ಕುಣಿತ ಭಜನೆಯ ತರಬೇತಿದಾರರುಗಳ ಸಂಘ ಸ್ಥಾಪನೆಯ ಕಾರಣಿಕರ್ತರಾಗಿ ಅದರ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದು ಇದೀಗ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ರಾಜ್ಯಾಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾದ ಪಿ.ಚಂದ್ರಶೇಖರ ಸಾಲ್ಯಾನ್ ಇವರಿಗೆ ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೇರಲ್ ಕೊಯ್ಯೂರು ಇದರ ವತಿಯಿಂದ ಅಭಿನಂದನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಭಜನಾ ಮಂಡಳಿಯ ಅಧ್ಯಕ್ಷ ರೋಹಿತಾಕ್ಷ ಉಮಿಯ ದರ್ಕಾಸು, ಕಾರ್ಯದರ್ಶಿ ಓಬಯ್ಯ ನಾಯ್ಕ, ಗೌರವಾಧ್ಯಕ್ಷ ವಿಶ್ವನಾಥ ಗೌಡ ಬಚ್ಚಿರೆದಡಿ, ಊರಿನ ಪ್ರಗತಿಪರ ಕೃಷಿಕರು ಹಿರಿಯರು ಭಜನಾ ಮಂಡಳಿಯ ಗೌರವ ಸಲಹೆಗಾರ ಪ್ರಚಂಡಬಾನು ಭಟ್ ಪಾಂಬೆಲು, ಸಲಹೆಗಾರರುಗಳಾದ ಶೇಖರ ಗೌಡ ಕೋರಿಯಾರು, ಕುಶಲಪ್ಪ ನಾಯ್ಕ ಕುಕ್ಕುದಡಿ, ಉಪಾಧ್ಯಕ್ಷರುಗಳಾದ ಸುಂದರ ಗೌಡ, ಕಜೆಕೋಡಿ ರಮೇಶ್ ಗೌಡ ಮಾವಿನಕಟ್ಟೆ, ಜೊತೆ ಕಾರ್ಯದರ್ಶಿಗಳಾದ ಅಶೋಕ ಪೂಜಾರಿ, ಕುಂಇಿಮೇರು ಜಿತೇಶ್ ಪೂಜಾರಿ ಸಾಂತ್ಯೋಡಿ, ಲೆಕ್ಕ ಪರಿಶೋಧಕರುಗಳಾದ ಲಿಂಗಪ್ಪ ಗೌಡ ಬೆರ್ಕೆ, ಹೇಮಂತಗೌಡ ದೆಂತ್ಯಾರು ಬೊಟ್ಟು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ದೇಜಪ್ಪಗೌಡ ಬೆಲ್ದೆ, ಮಹಿಳಾ ಭಜನಾ ತಂಡದ ಅಧ್ಯಕ್ಷೆ ಪೂರ್ಣಿಮಾ ಹೇಮಂತ ಗೌಡ ಜಂಕಿನಡ್ಕ, ಗೌರವಾಧ್ಯಕ್ಷೆ ಮಾಲಿನಿ ಧನಂಜಯ ಆಚಾರ್ಯ ಕೋಡಿಯಲು, ಜೊತೆ ಕಾರ್ಯದರ್ಶಿ ಹರಿನಾಕ್ಷಿ ಆದೂರು ಪೆರಾಲ್, ಸಂಘಟನಾ ಕಾರ್ಯದರ್ಶಿ ಅಶ್ವಿನಿ ಕಾಂತಪ್ಪ ಗೌಡ ಬರೆಮೇಲು, ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ವಿನಯ್ ಕೆ, ಉಪಾಧ್ಯಕ್ಷ ಯಶವಂತ ಗೌಡ ಪುರ್ಯಳ, ಕಾರ್ಯದರ್ಶಿ ಮನೋಜ್ ಕಜೆ, ಜೊತೆ ಕಾರ್ಯದರ್ಶಿ ದಿನೇಶ್ ಜಾನ್ಲಾಪು, ಕೋಶಾಧಿಕಾರಿ ಗೀತಾ ರಾಮಣ್ಣ ಗೌಡ ಕೋಡಿಯೆಲು, ಕ್ರೀಡಾ ಸಮಿತಿಯ ಸಂಚಾಲಕ ದಾಮೋದರ ಗೌಡ ಬೆರ್ಕೆ, ಹರ್ಷ ಗೆಳೆಯರ ಬಳಗದ ಅಧ್ಯಕ್ಷ ರಾಮಣ್ಣ ಗೌಡ ಕುಂಞಮೇರು, ಕಾರ್ಯದರ್ಶಿ ಭರತ್ ಡೆoಬುಗ ಮತ್ತು ಭಜನಾ ಮಂಡಳಿಗಳ ಸದಸ್ಯರುಗಳು ಪಾಲ್ಗೊಂಡಿದ್ದರು.

Exit mobile version