Site icon Suddi Belthangady

ದೇವರನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

ಬಳಂಜ: ಕುಣಿತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಸದಸ್ಯರು ದೇವರನಾಡು ಕೇರಳದ ಕಾಸರಗೋಡು ಜಿಲ್ಲೆಯ ಬಂದಡ್ಕ ಶ್ರೀ ದುರ್ಗಾ ಬಾಲಗೋಕುಲ ಸ್ಥಾನಿಯ ಸಮಿತಿ ವತಿಯಿಂದ ನಡೆದ ಶ್ರೀ ಕೃಷ್ಣ ಜಯಂತಿ ಅಂಗವಾಗಿ ನಡೆದ ಕುಣಿತ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ನೀಡಿದರು.

ಸಮಾಜ ಸೇವಕರಾದ ಹರೀಶ್ ವೈ ಚಂದ್ರಮರ ಪ್ರಧಾನ ಸಂಚಾಲಕತ್ವದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಈಗಾಗಲೇ 236ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿದ್ದು 8 ಜಿಲ್ಲೆ ಹಾಗೂ ಎರಡು ಹೊರ ರಾಜ್ಯದಲ್ಲಿ ಕುಣಿತ ಭಜನೆಯಲ್ಲಿ ಭಾಗವಹಿಸಿ ಹೆಸರನ್ನು ಪಡೆದಿದೆ.ಇದರ ಜೊತೆಗೆ ಹಲವು ಜನಪರ ಸೇವೆಯನ್ನು ಸಹ ಮಾಡುತ್ತಾ ಬರುತ್ತಿದ್ದಾರೆ.

ಕೇರಳದಲ್ಲಿ ನಡೆದ ಕುಣಿತ ಭಜನಾ ಕಾರ್ಯಕ್ರಮವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಅಲ್ಲಿನ ಸಮಿತಿಯವರು ಮಂಡಳಿಯ ಸಂಚಾಲಕ ಹರೀಶ್ ವೈ.ಚಂದ್ರಮ, ಅಧ್ಯಕ್ಷ ಜ್ಯೋತಿ ಹಾಗೂ ತರಬೇತುದಾರರಾದ ಕು.ಮಾನ್ಯ ರವರನ್ನು ಸನ್ಮಾನಿಸಿದರು.

ಪೋಷಕರು ಮತ್ತು ಮಂಡಳಿಯ ಸದಸ್ಯರ ಪೂರ್ಣ ಸಹಕಾರದಿಂದ ಇಷ್ಟು ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಾಗಿದೆ ಎಂದು ಹರೀಶ್ ವೈ.ಚಂದ್ರಮ ಸಂತಸ ವ್ಯಕ್ತಪಡಿಸಿದ್ದಾರೆ.ಮಂಡಳಿಯ ಮುಖ್ಯ ತರಬೇತುದಾರರಾಗಿ ಕು.ಮಾನ್ಯ ಹಾಗೂ ಅಧ್ಯಕ್ಷರಾಗಿ ಕು.ಜ್ಯೋತಿ, ಉಪ ಸಂಚಾಲಕರಾಗಿ ಪ್ರಣಾಮ್ ಶೆಟ್ಟಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Exit mobile version