Site icon Suddi Belthangady

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ಎಮ್.ಎನ್.ವಿಕಾಸ್ ಮಂಗಳೂರು ವಲಯ ಅಂಡರ್-19 ಬಾಲಕರ ಕ್ರಿಕೆಟ್ ಪಂದ್ಯಾಟಕ್ಕೆ ಆಯ್ಕೆ

ಮಡಂತ್ಯಾರು: ಕರ್ನಾಟಕ ರಾಜ್ಯ ಕ್ರಿಕೆಟ್ ಆಸೋಸಿಯೇಶನ್ ಇದರ ಆಶ್ರಯದಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂಡರ್-19 ಬಾಲಕರ ಅಂತರ್ ವಲಯ ಕ್ರಿಕೆಟ್ ಪಂದ್ಯಾಟಕ್ಕೆ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜುವಿನ ದ್ವೀತಿಯ ಪದವಿ ವಾಣಿಜ್ಯ ಶಾಸ್ತ್ರದ ವಿದ್ಯಾರ್ಥಿ ಎಮ್.ಎನ್.ವಿಕಾಸ್‌ರವರು ಆಯ್ಕೆಯಾಗಿರುತ್ತಾರೆ.

ಆಗಸ್ಟ್ ತಿಂಗಳಿನಲ್ಲಿ ನಡೆಯುತ್ತಿರುವ ಈ ಪ್ರತಿಷ್ಠಿತ ಪಂದ್ಯಾಟದಲ್ಲಿ ಭಾಗವಹಿಸುತ್ತಿರುವ ವಿಕಾಸ್‌ರವರು ಮಂಗಳೂರಿನ ಅಡ್ಯಾರ್‌ನಲ್ಲಿ ವಾಸಿಸುತ್ತಿರುವ ನಟೇಶ್ ಹಾಗೂ ಸವಿತಾ ದಂಪತಿಗಳ ಪುತ್ರ.

Exit mobile version