Site icon Suddi Belthangady

ಕಳಿಯ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ

ಕಳಿಯ: ಗ್ರಾಮ ಪಂಚಾಯತ್ ನಲ್ಲಿ ಹಲವಾರು ವರ್ಷಗಳಿಂದ ಬಡವರು ನಿವೇಶನಕ್ಕೆ ಅರ್ಜಿ ಸಲ್ಲಿಸುತ್ತಲೇ ಬರುತ್ತಿದ್ದು ಯಾವುದೇ ಹಕ್ಕು ಪತ್ರವನ್ನು ನೀಡಲು ಸಾದ್ಯವಾಗುತ್ತಿರಲಿಲ್ಲ.

ಪಂಚಾಯತ್ ಆಡಳಿತ ಮಂಡಳಿಯು ಇದನ್ನು ಗಂಭೀರವಾಗಿ ಪರಿಗಣಿಸಿ ಸಾಮಾನ್ಯ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿ ಆಡಳಿತ ಮಂಡಳಿಯ ಒಮ್ಮತದ ತೀರ್ಮಾನದಂತೆ ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮಾನ್ಯ ಜಿಲ್ಲಾಧಿಕಾರಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಭೇಟಿಯ ನಿಯೋಗದಲ್ಲಿ ಅಧ್ಯಕ್ಷ ದಿವಾಕರ ಎಂ, ಉಪಾದ್ಯಕ್ಷೆ ಇಂದಿರಾ, ಕಾರ್ಯದರ್ಶಿ ಕುಂಙ ಕೆ, ಸದಸ್ಯರಾದ ಅಬ್ದುಲ್ ಕರೀಮ್, ಸುದಾಕರ ಮಜಲು, ಲತೀಫ್ ಪರಿಮ, ಮೋಹಿನಿ, ಮರೀಟಾ ಪಿಂಟೋ, ಪುಷ್ಪಾ, ಶ್ವೇತಾ ಉಪಸ್ಥಿತರಿದ್ದರು.

Exit mobile version