ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ- ರೂ.43.41 ಲಕ್ಷ ನಿವ್ವಳ ಲಾಭ, ಶೇ.15 ಡಿವಿಡೆಂಡ್ ಘೋಷಣೆ

0

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ 2023-24ನೇ ಸಾಲಿನ 14ನೇ ವಾರ್ಷಿಕ ಮಹಾಸಭೆ ಆಗಸ್ಟ್ 31ರಂದು ಸಂಘದ ಕಛೇರಿ ವಠಾರದಲ್ಲಿ ಸಂಘದ ಅಧ್ಯಕ್ಷ ಅನಿಲ್ ಎ.ಜೆರವರ ಅಧ್ಯಕ್ಷತೆಯಲ್ಲಿ ಜರುಗಿತು.

2023-24ನೇ ಸಾಲಿನಲ್ಲಿ ರೂ.106 ಕೋಟಿ ವ್ಯವಹಾರ ನಡೆಸಿ ನಿವ್ವಳ ರೂ.43.41 ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15ರಷ್ಟು ಡಿವಿಡೆಂಡ್ ನೀಡಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಎ.ಜೆರವರು ತಿಳಿಸಿದರು.

ಸಂಘದ ಉಪಾಧ್ಯಕ್ಷ ಜಾರ್ಜ್ ಎಮ್.ವಿ ರವರು ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೋಜ್ ಪಿ.ಎ 2023-24ನೇ ಸಾಲಿನ ಲೆಕ್ಕ ಪತ್ರವನ್ನು ಮಂಡಿಸಿದರು.

ನಿರ್ದೇಶಕರುಗಳಾದ ಸೆಬಾಸ್ಟೀನ್ ವಿ.ಟಿ, ಜೈಸನ್ ಪಟ್ಟೇರಿಲ್, ಅಂದಾನಿ ಕೆ.ಡಿ, ಬಾಬು ತೋಮಸ್, ಬಿಜು ಪಿ.ಪಿ, ಬಿಜು ಎಮ್.ಜೆ, ಸೆಬಾಸ್ಟೀನ್, ಸೋಪಿ ಜೋಸೆಫ್, ಫಿಲೋಮಿನಾ ವಿ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕರಾಗಿ ಸಂಘದ ಅಭಿವೃದ್ದಿಯಲ್ಲಿ ಪ್ರಾಮಾಣಿಕ ಸೇವೆಗೈದ ಸಂಘದ ಬೆಳವಣಿಗೆಗೆ ಕಾರಣಕರ್ತರಾದ ಪ್ರಥಮ ಮತ್ತು ದ್ವಿತೀಯ ಆಡಳಿತ ಮಂಡಳಿ ಸದಸ್ಯರನ್ನು ಮತ್ತು ಬೆಳ್ತಂಗಡಿ ತಾಲ್ಲೂಕಿನಲ್ಲಿರುವ 16 ಸಿರೋ ಮಲಬಾರ್ ದೇವಾಲಯದ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ನಿರ್ದೇಶಕ ಜೈಸನ್ ಪಟ್ಟೇರಿಲ್ ರವರು ವಂದಿಸಿ, ಕಾರ್ಯಕ್ರಮ ಯಶ್ವಸಿಯಾಗಿ ನಡೆಸಲು ಶಾಖಾ ವ್ಯವಸ್ಥಾಪಕ ಮ್ಯಾಥ್ಯು ಕೆ.ಕೆ, ಸುಜಾ ಜೇಮ್ಸ್ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು. ಬೆಳ್ತಂಗಡಿ ಶಾಖಾ ವ್ಯವಸ್ಥಾಪಕ ರೇಷ್ಮಾ ಅಬ್ರಾಹಂರವರು ನಿರೂಪಿಸಿದರು.

LEAVE A REPLY

Please enter your comment!
Please enter your name here