Site icon Suddi Belthangady

ಬಾಲಕೃಷ್ಣ ಬಡೆಕ್ಕಿಲ್ಲಾಯ ಕೊಲೆ ಕೇಸ್- ಆರೋಪಿಗಳು ಮಂಗಳೂರು ಜೈಲಿಗೆ ಶಿಫ್ಟ್- ಪೊಲೀಸ್ ಕಸ್ಟಡಿ ಮುಕ್ತಾಯ, ತಂದೆ-ಮಗನಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ: ಬೆಳಾಲು ನಿವಾಸಿ, ನಿವೃತ್ತ ಶಿಕ್ಷಕ ಬಾಲಕೃಷ್ಣ ಬಡೆಕ್ಕಿಲ್ಲಾಯ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಮಂಗಳೂರು ಉಪ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.ಆ.20ರಂದು ಬಾಲಕೃಷ್ಣ ಬಡೆಕ್ಕಿಲ್ಲಾಯ(83)ರನ್ನು ಹತ್ಯೆಗೈದ ಆರೋಪದಲ್ಲಿ ಕಾಸರಗೋಡು ನಿವಾಸಿಗಳಾದ ಅಳಿಯ ರಾಘವೇಂದ್ರ ಕೆದಿಲಾಯ ಮತ್ತು ಮೊಮ್ಮಗ ಮುರಳಿಕೃಷ್ಣ(21)ರನ್ನು ಧರ್ಮಸ್ಥಳ ಪೊಲೀಸರು ಆ.24ರಂದು ಬಂಧಿಸಿದ್ದರು.

ಬೆಳ್ತಂಗಡಿಯ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯವು ಆರೋಪಿಗಳನ್ನು ಆ.31ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ಈ ವೇಳೆ ಪೊಲೀಸರು ಆರೋಪಿಗಳು ಹತ್ಯೆಗೆ ಬಳಸಿದ ಬೈಕ್, ಬಟ್ಟೆ, ಕತ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಮಹಜರು ಸಹಿತ ತನಿಖೆ ಪೂರ್ಣಗೊಳಿಸಿದ್ದು, ಆ.30ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Exit mobile version