Site icon Suddi Belthangady

ಸಹಾಯಕ ಕೃಷಿ ನಿರ್ದೇಶಕಿಯಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಶೈಲಜಾ ಎ.ಎನ್.ರವರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ವಿವಿಧ ಕಚೇರಿಗಳಲ್ಲಿ ಒಟ್ಟು 30 ವರ್ಷ 9 ತಿಂಗಳು 11 ದಿನಗಳ ಪರ್ಯಂತ ಸೇವೆ ಸಲ್ಲಿಸಿ ಆ.31ರಂದು ಸ್ವಯಂ ನಿವೃತ್ತಿಯನ್ನು ಪಡೆದ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಸಹಾಯಕ ಕೃಷಿ ನಿರ್ದೇಶಕಿ ಶೈಲಜಾ ಎ.ಎನ್. ಇವರನ್ನು ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಬೆಳ್ತಂಗಡಿಯ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು ಆತ್ಮೀಯವಾಗಿ ಬೀಳ್ಕೊಡುಗೆ ನೀಡಿ ಗೌರವಿಸಿ, ಶೈಲಜಾ ಇವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸಂಜೀವ ನಾಯ್ಕ ಉಜಿರೆ, ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್, ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕ ರಂಜಿತ್ ಕುಮಾರ್, ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ಖಜಾನೆ ಇಲಾಖೆ ಬೆಳ್ತಂಗಡಿಯ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು, ಅಳದಂಗಡಿ ಎಫ್.ಪಿ.ಒ ಅಧ್ಯಕ್ಷ ಹರಿದಾಸ್, ಸುಕನ್ಯಾ ಪ್ರಗತಿಪರ ಕೃಷಿಕ ಪ್ರಭಾಕರ ಮಯ್ಯ ಸುರ್ಯ ಮತ್ತಿತರೆ ಪ್ರಮುಖರು ಭಾಗವಹಿಸಿದ್ದರು.ರಸಗೊಬ್ಬರ ನಿಯಂತ್ರಣ ಪ್ರಯೋಗಾಲಯ ಕೃಷಿ ಅಧಿಕಾರಿ ಗಣೇಶ್ ಕಾರ್ಯಕ್ರಮ ನಿರೂಪಿಸಿದರು.

Exit mobile version