Site icon Suddi Belthangady

ಬೆಳ್ತಂಗಡಿ: ಹಳೆಕೋಟೆ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್ ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ ನೇಮಕ

ಬೆಳ್ತಂಗಡಿ: ಹಳೆಕೋಟೆ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್ ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ ಅವರು ನೇಮಕವಾಗಿದ್ದಾರೆ.

ನಿರ್ದೇಶಕರಾಗಿ ಗೋಪಾಲಕೃಷ್ಣ ಬಿ ಗುಲ್ಲೋಡಿ, ಜಯಾನಂದ ಗೌಡ ಟಿ ಪ್ರಜ್ವಲ್, ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ದೇವಸ, ಮಾಧವ ಗೌಡ ಬೆಳ್ತಂಗಡಿ, ಸುರೇಶ್ ಬಿ ಕೌಡಂಗೆ, ಯಶವಂತ ಬಿ.ಟಿ ಬೆಳಾಲು, ಸುನೀಲ್ ಅಣವು, ಪುರಂದರ ಗೌಡ ಎನ್ ಮೊಗ್ರು, ಮಹಿಳಾ ಕ್ಷೇತ್ರದಿಂದ ಉಷಾದೇವಿ ಕಿನ್ಯಾಜೆ, ಭವಾನಿ ಕೆ ಗೌಡ ಮೂಡಾಯೂರು, ಹಿಂದುಳಿದ ವರ್ಗ ಬಿ ಯಿಂದ ಶ್ರೀನಾಥ್ ಕೆ ಎಮ್ ನಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹಕಾರಿಯ ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಧನಂಜಯ ಕುಮಾರ್ ಟಿ.ಎಸ್ ಹಾಗೂ ಸಿಬ್ಬಂದಿ ವರ್ಗ ಸಹಕರಿಸಿದರು.

Exit mobile version