ಸಾರ್ವಜನಿಕ ಉದ್ದಿಮೆಗಳಾದ ಕೆಐಒಸಿಎಲ್ ಸಂಸ್ಥೆಯನ್ನು ಎನ್ಎಮ್ ಡಿಸಿ ಸಂಸ್ಥೆಯೊಂದಿಗೆ ವಿಲೀನ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಪ್ರಧಾನ ಮಂತ್ರಿ ಹಾಗೂ ಕೇಂದ್ರ ಉಕ್ಕು ಸಚಿವರಿಗೆ ಒತ್ತಾಯಿಸುವಂತೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಮನವಿ

0

ಬೆಳ್ತಂಗಡಿ: ಕೇಂದ್ರ ಸರಕಾರದ ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ ಕೆಐಒಸಿಎಲ್(KIOCL) ಸಂಸ್ಥೆಯನ್ನು ಎನ್ಎಮ್ ಡಿಸಿ(NMDC) ಸಂಸ್ಥೆಯೊಂದಿಗೆ ವಿಲೀನ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಒತ್ತಾಯಿಸುವ ಅಂಗವಾಗಿ ರಾಜ್ಯಸಭಾ ಸದಸ್ಯ, ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರನ್ನು ಧರ್ಮಸ್ಥಳದಲ್ಲಿ ಸೆ.02ರಂದು ಭೇಟಿಯಾಗಿ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯನ್, ದ.ಕ ಜಿಲ್ಲಾ ಬಿಎಮ್ಎಸ್ ಇದರ ಜಿಲ್ಲಾಧ್ಯಕ್ಷರು ವಕೀಲರಾದ ಅನಿಲ್ ಕುಮಾರ್ ಯು ರವರುಗಳ ನೇತೃತ್ವದಲ್ಲಿ (KIOCL) ಕುದುರೆಮುಖ ಮಜ್ದೂರ್ ಸಂಘದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಂದ್ರೇಗೌಡ, ಕಾರ್ಯಾಧ್ಯಕ್ಷರುಗಳಾದ ಭಗವಾನ್ ದಾಸ್ ಬಿ ಎನ್, ಕೆಂಚೇಗೌಡ, ಖಜಾಂಚಿ ಉದಯಕುಮಾರ್ ಬಿಸಿ ಸಂಘಟನಾ ಕಾರ್ಯದರ್ಶಿಯಾದ ಶ್ರೀಧರ್ ಉಳ್ಳಾಲ್, ಮತ್ತು ಪಾಲಯ್ಯ, ಶ್ರೀಮಂದ್ರ ಇವರುಗಳು ಉಪಸ್ಥಿತರಿದ್ದು, ತ್ವರಿತವಾಗಿ ವಿಲೀನ ಪ್ರಕ್ರಿಯೆಯನ್ನು ಜಾರಿಗೊಳಿಸಲು ಸಹಕರಿಸಬೇಕಾಗಿ ವಿನಂತಿಸಲಾಯಿತು.

ಮನವಿಯನ್ನು ಸ್ವೀಕರಿಸಿ ಪ್ರಧಾನಮಂತ್ರಿಯವರಿಗೆ ಈ ನಿಟ್ಟಿನಲ್ಲಿ ಮಾಹಿತಿ ನೀಡಿ ತ್ವರಿತ ಗತಿಯಲ್ಲಿ ವಿಲೀನ ಪ್ರಕ್ರಿಯೆಯನ್ನು ಮಾಡುವಂತೆ ನಾನು ಕೂಡ ಮನವಿ ಮಾಡುತ್ತೇನೆ, ಹಾಗೆಯೇ ಸಚಿವ ಕುಮಾರಸ್ವಾಮಿಯವರು ಸದ್ಯದಲ್ಲಿಯೇ ಕ್ಷೇತ್ರಕ್ಕೆ ಭೇಟಿ ನೀಡುವ ಸಮಯದಲ್ಲಿ ಈ ಬಗ್ಗೆ ಮಾತುಕತೆ ಮಾಡಿ ಗುಣಾತ್ಮಕವಾಗಿ ಒಟ್ಟಾಗಿ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ಖಂಡಿತಾ ಮಾಡೋಣ ಎಂದು ಭರವಸೆ ನೀಡಿದರು.

LEAVE A REPLY

Please enter your comment!
Please enter your name here