ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಪಟ್ಟಾಭಿಷೇಕ ವರ್ಧಂತಿ- ರಕ್ಷಿತ್ ಶಿವರಾಮ್ ಭೇಟಿ, ಸ್ವಾಮೀಜಿಯವರಿಂದ ಗೌರವ

0

ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ಪಟ್ಟಾಭಿಷೇಕ ವರ್ಧಂತಿ ಅಂಗವಾಗಿ ಸೆ.3ರಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗುರುದೇವ ಮಠದಲ್ಲಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.ಇವರನ್ನು ಕ್ಷೇತ್ರದ ವತಿಯಿಂದ ಸ್ವಾಮೀಜಿಯವರು ಸನ್ಮಾನಿಸಿ ಗೌರವಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮೀನುಗಾರಿಕೆ ಮತ್ತು ಒಳನಾಡು ಸಚಿವ ಮಾಂಕಾಳ್ ಎಸ್.ವೈದ್ಯ, ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಸುವರ್ಣ, ಬೆಳ್ತಂಗಡಿ ಬ್ಲಾಕ್ ನಗರ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಯಶೋಧರ ಚಾರ್ಮಾಡಿ, ರಜತ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here