ಕಾಶಿಪಟ್ಣ ಹಿರಿಯ ಪ್ರಾಥಮಿಕ ಶಾಲೆ ಮೇಲ್ಚಾವಣಿ ಕುಸಿತ: ಮನವಿಗೆ ಸ್ಪಂದಿಸಿದ ಶಾಸಕ ಹರೀಶ್ ಪೂಂಜ: ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್, ಅಧಿಕಾರಿಗಳಿಗೆ ಕಾಮಗಾರಿಯನ್ನು ನಿರ್ವಹಿಸಲು ಸೂಚನೆ

0

ಕಾಶಿಪಟ್ಣ: ವಿಪರೀತ ಮಳೆ ಕಾರಣ ಕಾಶಿಪಟ್ಣ ಹಿರಿಯ ಪ್ರಾಥಮಿಕ ಶಾಲೆ ಮೇಲ್ಚಾವಣಿ ಕುಸಿತಕ್ಕೊಳಗಾಗಿದ್ದು. ಶಾಸಕರ ಗಮನಕ್ಕೆ ತಂದಾಗ ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ ಹಾಗೂ ಅಧಿಕಾರಿಗಳನ್ನು ಕಳುಹಿಸಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ತುರ್ತು ಕಾಮಗಾರಿಯನ್ನು ನಿರ್ವಹಿಸಲು ಇಲಾಖೆಗೆ ಸೂಚಿಸಿದರು.

ಈ ಹಿಂದೆ ಇದೇ ಶಾಲೆಗೆ ಹೊಸ ಕೊಠಡಿಯನ್ನು ನೀಡಿರುವ ಶಾಸಕರು ಈ ಬಗ್ಗೆಯೂ ಸರಕಾರದ ಗಮನಕ್ಕೆ ತಂದು ತುರ್ತು ಕಾಮಗಾರಿ ನಡೆಸಲು ಅನುದಾನ ನೀಡುವಂತೆ ಒತ್ತಾಯಿಸುತ್ತೇನೆ ಎಂದು ಭಾರವಸೆ ನೀಡಿದರು.

ತಕ್ಷಣವೇ ಸ್ಪಂದಿಸಿದ ಶಾಸಕ ಹರೀಶ್ ಪೂಂಜಾರಿಗೆ ಪೋಷಕರು ಹಾಗೂ ಊರವರು ಮೆಚ್ಚುಗೆ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here