ಸೆ.8: ನಿಡ್ಲೆ ಪ್ರಾ.ಕೃ.ಪ.ಸ.ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ ಸಮಾರಂಭ

0

ನಿಡ್ಲೆ: ನಿಡ್ಲೆ-ಕಳೆಂಜ ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವ ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಯಶಸ್ವಿಯಾಗಿ ಶತ ಸಂವತ್ಸರಗಳನ್ನು ಪೂರೈಸಿರುವ ಸವಿನೆನಪಿಗಾಗಿ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.8ರಂದು ಸಂಘದ ಕೇಂದ್ರ ಕಛೇರಿ ವಠಾರದಲ್ಲಿ ಜರಗಲಿರುವುದು.

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಛೇರಿ ಮತ್ತು ಗೋದಾಮು ಕಟ್ಟಡ ಉದ್ಘಾಟನೆಯನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಇವರು ನೆರವೆರಿಸಲಿದ್ದಾರೆ.

ಸಂಘದ ಭದ್ರತಾ ಕೊಠಡಿ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ, ಕ್ಯಾಂಪ್ಲೋ ಖರೀದಿ ಕೇಂದ್ರ ಉದ್ಘಾಟನೆಯನ್ನು ಮಂಗಳೂರು ಕ್ಯಾಂಪ್ಲೋ ಲಿ.ಉಪಾಧ್ಯಕ್ಷರು ಶಂಕರ ನಾರಾಯಣ ಭಟ್, ಅಧ್ಯಕ್ಷತೆಯನ್ನು ನಿಡ್ಲೆ ಪ್ರಾ.ಕೃ.ಪ.ಸ.ಸಂಘ ನಿಯಮಿತ ಅಧ್ಯಕ್ಷ ರಮೇಶ್ ರಾವ್ ಕೆ., ಮುಖ್ಯ ಅತಿಥಿಗಾಳಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ವಿ.ಪ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ್, ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ಸುಚರಿತ ಶೆಟ್ಟಿ, ಜಿಲ್ಲಾ ಕೇಂದ್ರ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಬೆಳ್ತಂಗಡಿ ತಾ. ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘ ಉಜಿರೆ ಅಧ್ಯಕ್ಷರು ಶ್ರೀಧರ ಜಿ. ಭಿಡೆ, ದ.ಕ.ಜಿ. ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಮಂಗಳೂರು ಕೆ.ಎಂ.ಎಫ್ ನಿರ್ದೇಶಕ ಪದ್ಮನಾಭ ಅರ್ಕಜೆ, ನಿಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ಯಾಮಲ, ಕಳೆಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಿರಿಜಾ, ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಹೆಚ್.ಎನ್., ಮಂಗಳೂರು ನಬಾರ್ಡ್ ಎ.ಜಿ.ಎಂ. ಸಂಗೀತಾ ಕರ್ತಾ, ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ರಘು ಎಸ್.ಎಂ., ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ ಪ್ರತಿಮಾ ಭಾಗವಹಿಸಲಿದ್ದಾರೆ ಎಂದು ಸಂಘದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here