Site icon Suddi Belthangady

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದ ವತಿಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ.ಶಾಲೆಗೆ ಉಚಿತ ಊಟದ ತಟ್ಟೆ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ವತಿಯಿಂದ ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಊಟದ ತಟ್ಟೆ ವಿತರಣಾ ಕಾರ್ಯಕ್ರಮ ಸೆ.3ರಂದು ನಡೆಯಿತು.

ಈ ಒಂದು ಕಾರ್ಯಕ್ರಮದಲ್ಲಿ ಎಸ್ ಕೆ ಡಿ ಆರ್ ಡಿ ಪಿ ಬೆಳ್ತಂಗಡಿ ಇದರ ಮೇಲ್ವಿಚಾರಕ ಹರೀಶ್, ಕೇಂದ್ರ ವಲಯ ಬೆಳ್ತಂಗಡಿ ಇದರ ಅಧ್ಯಕ್ಷ ಸೀತಾರಾಮ್, ಹುಣಸೆಕಟ್ಟೆ ಒಕ್ಕೂಟದ ಅಧ್ಯಕ್ಷ ದಯಾನಂದ, ಸೇವಾ ಪ್ರತಿನಿಧಿಗಳಾದ ಜ್ಯೋತಿ, ಹುಣಸೆಕಟ್ಟೆ ಭಜನಾ ಮಂಡಳಿ ಅಧ್ಯಕ್ಷ ಲಕ್ಷ್ಮಣ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಚರಣ್ ಕುಮಾರ್, ಶಾಲಾ ಮುಖ್ಯೋಪಾಧ್ಯಾಯ ಸೂರ್ಯನಾರಾಯಣ ಪುತ್ತೂರಾಯ, ಹಿರಿಯ ಶಿಕ್ಷಕ ದಿನಕರ್ ನಾಯಕ್ ಹಾಗೂ ಶಾಲಾ ಶಿಕ್ಷಕ ವೃಂದ ಮತ್ತು ಮಕ್ಕಳು ಉಪಸ್ಥಿತರಿದ್ದರು.

Exit mobile version