Site icon Suddi Belthangady

ಡಾ|ಬಿ.ಎ.ಕುಮಾರ್ ಹೆಗ್ಡೆಯವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘಟನೆಯ ಉನ್ನತ ಮಟ್ಟದ ಸಮಿತಿಯು 2024ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲ ಡಾ|ಬಿ.ಎ.ಕುಮಾರ ಹೆಗ್ಡೆಯವರನ್ನು ಆಯ್ಕೆ ಮಾಡಿದೆ.

ಪ್ರಾಂಶುಪಾಲರಾಗಿ ಆಡಳಿತ ನಿರ್ವಹಣಾ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆ, ಕಾಲೇಜಿನ ಪಠ್ಯ, ಪಠ್ಯೇತರ, ಸಾಂಸ್ಕೃತಿಕ, ಕ್ರೀಡಾ, ವಿಸ್ತರಣಾ ಹಾಗೂ ಸಂಶೋಧನಾ ಕ್ಷೇತ್ರಗಳ ಅಭಿವೃದ್ಧಿಗೆ ರಚನಾತ್ಮಕ ಚಟುವಟಿಕೆಗಳನ್ನು ಸಂಘಟಿಸಿದ ಹಿನ್ನೆಲೆಯಲ್ಲಿ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ. ಸೆ.15ರಂದು ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಜರುಗುವ ಸಮಾರಂಭದಲ್ಲಿ ಶಿಕ್ಷಣ ತಜ್ಞ, ರಾಷ್ಟ್ರೀಯ ಮೌಲ್ಯಾಂಕನ ಪರಿಷತ್(ನ್ಯಾಕ್) ಅಧ್ಯಕ್ಷ ಡಾ.ಅನಿಲ್ ಸಹಸ್ರಬುದ್ಧೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Exit mobile version