Site icon Suddi Belthangady

ಕರಾಯ: ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ತಣ್ಣೀರುಪಂತ: ಶ್ರೀ ಕ್ಷೇ.ಧ.ಗ್ರಾ.ಯೋಜನೆ ತಣ್ಣೀರುಪಂತ ವಲಯ ಮತ್ತು ಜನಜಾಗೃತಿ ವೇದಿಕೆ ತಣ್ಣೀರುಪಂತ ವಲಯ ವತಿಯಿಂದ ಕರಾಯ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯ ಬಸವಲಿಂಗಪ್ಪ ಉದ್ಘಾಟಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶಿಬಿರಾಧಿಕಾರಿ ದೇವಿಪ್ರಸಾದ್ ಇವರು ದುಶ್ಚಟ ಮುಕ್ತ ಸಮಾಜದಲ್ಲಿ ವಿದ್ಯಾರ್ಥಿ ಪಾತ್ರ ಪ್ರಮುಖ ಎಂದರು.

ಪ್ರಸ್ತುತ ವಿದ್ಯಾಮಾನದಲ್ಲಿ ದುರಭ್ಯಾಸ ಬಲಿಯಾಗುತ್ತಿರುವುದು ವಿಪರ್ಯಾಸ ಎಂದರು. ಗೂಡಂಗಡಿ ಅನ್ನೋದು ಅದು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುವ ಕೇಂದ್ರ ಇಲ್ಲಿಯೇ ದುಶ್ಚಟ ಕಲಿಯಲು ಮೂಲ ಇದರಿಂದ ದೂರ ಇರಲು ಎಚ್ಚರದ ಸಂದೇಶದ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕರಾಯ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರ ಅನಂತ ಕೃಷ್ಣಕುದ್ದಾಣ್ಣಾಯ, ಹಿರಿಯ ಶಿಕ್ಷಕ ಶಿವಬಾಳು, ಸಹಶಿಕ್ಷಕರು, ವಲಯ ಮೇಲ್ವಿಚಾರಕರು ಮತ್ತು ಸೇವಾಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Exit mobile version