Site icon Suddi Belthangady

ತಣ್ಣೀರುಪಂತ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

ತಣ್ಣೀರುಪಂತ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೋಸೊಂದೋಡಿ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಒಕ್ಕೂಟದ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಜವಾಬ್ದಾರಿ ಮತ್ತು ಯೋಜನೆಯ ವಿವಿಧ ಕಾರ್ಯಕ್ರಮದ ಬಗ್ಗೆ ಸೇವಾಪ್ರತಿನಿಧಿ ವಿಭಾಗ ಕೇಂದ್ರ ಕಚೇರಿ ಧರ್ಮಸ್ಥಳ ಯೋಜನಾಧಿಕಾರಿ ಶಿವಪ್ರಸಾದ್ ಇವರು ಮಾಹಿತಿ ನೀಡಿದರು. ನಾಯಕ ಮತ್ತು ನಾಯಕತ್ವದ ಜವಾಬ್ದಾರಿ ಬಗ್ಗೆ ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಪೂಜಾರಿ ಇವರು ಮಾಹಿತಿ ಮಾರ್ಗದರ್ಶನ ನೀಡಿದರು.

ಬ್ಯಾಂಕ್ ವ್ಯವಸ್ಥೆ ಮತ್ತು ದಾಖಲಾತಿಯ ಬಗ್ಗೆ ಮತ್ತು ಬಡ್ಡಿಯ ಲೆಕ್ಕಾಚಾರದ ಬಗ್ಗೆ MIS ಯೋಜನಾಧಿಕಾರಿ ಪ್ರೇಮಾನಾಥ್ ಇವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ನೂತನ ವಲಯದ್ಯಕ್ಷರಾಗಿ ರಾಜಶೇಖರ್ ರೈ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳು, ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Exit mobile version