Site icon Suddi Belthangady

ನೆರಿಯ: ದೇವಗಿರಿ ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ನೆರಿಯ ಗ್ರಾಮದ ದೇವಗಿರಿ ನಿವಾಸಿಯಾಗಿರುವ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಸ್ಥಳಿಯ ಪನಚ್ಚಿಕಲ್ ಜೋಸೆಫ್ (40 ವರ್ಷ) ಎಂಬಾತನಾಗಿದ್ದಾನೆ.

ಈತ ಆ 31ರಂದು ಮನೆಯಲ್ಲಿ ಹುಲ್ಲಿಗೆ ಸಿಂಪಡಿಸಲು ತಂದಿರಿಸಿದ್ದ ವಿಷವನ್ನು ತೆಗೆದು ಕುಡಿದಿದ್ದಾನೆ. ಕೂಡಲೇ ಮನೆಯವರು ಆತನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ, ಸೆ‌.4 ರಂದು ಮೃತಪಟ್ಟಿದ್ದಾನೆ.

ಮೃತ ಜೋಸೆಫ್‌ ಪತ್ನಿಯೊಂದಿಗೆ ಸದಾ ಜಗಳಾಡುತ್ತಿದ್ದ ಎನ್ನಲಾಗಿದ್ದು ಇದೇ ಕಾರಣಕ್ಕೆ ಆತನ ಪತ್ನಿ ಮಕ್ಕಳೊಂದಿಗೆ ಆ 28ರಂದು ಮನೆಯಿಂದ ತಾಯಿ ಮನೆಗೆ ಹೋಗಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿರಬಹುದು ಎಂದು ಅಂದಾಜಿಸಲಾಗಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Exit mobile version