Site icon Suddi Belthangady

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಸರ್ಕಾರವು ಜಾರಿ ಮಾಡಿರುವ ಯೋಜನೆಯನ್ನು ಜನಸಾಮಾನ್ಯರಿಗೆ ತಲುಪಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕೆ ಬಂಗೇರ, ನಾಗೇಶ್ ಕುಮಾರ್ ಗೌಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ, ಉಭಯ ಬ್ಲಾಕ್ ಎಸ್.ಸಿ ಘಟಕ ಅಧ್ಯಕ್ಷ ವಿಜಯ ಕುಮಾರ್ ಬಜಿರೆ, ನೇಮಿರಾಜ್ ಕಿಲ್ಲೂರು, ಜಿಲ್ಲಾ ಎಸ್.ಸಿ ಘಟಕದ ಉಪಾಧ್ಯಕ್ಷ ಓಬಯ್ಯ ಆರಂಬೋಡಿ, ತಾಲೂಕು ಅಕ್ರಮ-ಸಕ್ರಮ ಸಮಿತಿಯ ಸದಸ್ಯ ಶ್ರೀಧರ ಕಳೆಂಜ, ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ವೆಂಕಣ್ಣ ಕೊಯ್ಯುರು, ಸವಿತ ಅಟ್ರಿಂಜ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version