Site icon Suddi Belthangady

ಬೆಳ್ತಂಗಡಿ: ತಾ.ಪಂ. ಸಭಾಂಗಣದಲ್ಲಿ ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆಯು ತಾಲೂಕು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ.ಸಭಾಂಗಣದಲ್ಲಿ ಜರುಗಿತು.

ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿ, ಯೋಜನೆಯ ಅನುಷ್ಠಾನದ ವಿವರ ನೀಡಿದರು.

ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಅನುಷ್ಠಾನ ಸಮಿತಿಯ ಸದಸ್ಯರು, ಸಿ.ಡಿ.ಪಿ.ಓ. ಪ್ರಿಯಾ ಆಗ್ನೇಸ್, ಮೆಸ್ಕಾಂ ಇಲಾಖೆಯ ಬೆಳ್ತಂಗಡಿ ಉಪವಿಭಾಗದ ಕ್ಲೆಮೆಂಟ್ ಬ್ರಾಗ್ಸ್, ಉಜಿರೆ ಉಪ ವಿಭಾಗದ ಪ್ರವೀಣ್, ಆಹಾರ ನಿರೀಕ್ಷಕ ವಿಶ್ವ ಕೆ, ಉದ್ಯೋಗ ವಿನಿಮಯ ಕಚೇರಿಯ ಕೌನ್ಸಿಲರ್ ಶ್ರೀಮತಿ ಮಂಜುಷಾ, ನೋಡೆಲ್ ಅಧಿಕಾರಿ ಹೆರಾಲ್ಡ್ ಸಿಕ್ವೆರಾ, ಕೆ. ಎಸ್. ಆರ್. ಟಿ.ಸಿ.ಯ ಲಕ್ಷ್ಮಣ್, ಅನುಷ್ಠಾನ ಇಲಾಖೆಗಳ ವಿಷಯ ನಿರ್ವಾಹಕರು ಉಪಸ್ಥಿತರಿದ್ದರು.

ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಯುವ ನಿಧಿ, ಅನ್ನ ಭಾಗ್ಯ ಮತ್ತು ಶಕ್ತಿ ಯೋಜನೆಯ ಪ್ರಗತಿಯನ್ನು ಪರಿಶೀಲನೆ ನಡೆಸಲಾಯಿತು.

Exit mobile version