


ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ಪದವಿ ಪೂರ್ವ ಕಾಲೇಜಿನಲ್ಲಿ ಸಾಮಾಜಿಕ ಜಾಲತಾಣದ ಅನುಕೂಲ ಹಾಗೂ ಅನಾನುಕೂಲ ಕುರಿತು ಚರ್ಚಾಗೋಷ್ಠಿ.
ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣದ ಅನುಕೂಲ ಹಾಗೂ ಅನಾನುಕೂಲ ಕುರಿತು ಅರಿವು ಮೂಡಿಸುವ ಸಲುವಾಗಿ ಸೆ.6ರಂದು ಎಲ್. ಸಿ. ಆರ್ ಇಂಡಿಯನ್ ಪದವಿ ಪೂರ್ವ ಕಾಲೇಜಿನಲ್ಲಿ ಸಾಮಾಜಿಕ ಜಾಲತಾಣದ ಅನುಕೂಲ ಹಾಗೂ ಅನಾನುಕೂಲ ಕುರಿತು ಚರ್ಚಾಗೋಷ್ಠಿ”ಯನ್ನು ನಡೆಸಲಾಯಿತು.
ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್ ಜಿ ನಾಯಕ್, ಪದವಿ ಪೂರ್ವ ವಿಭಾಗದ ಮುಖ್ಯಸ್ಥೆಯಾದ ಸೌಮ್ಯ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ಪದವಿ ಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು.