ಮುಂಡೂರು: ಶ್ರೀ ಕ್ಷೇತ್ರ ಮಂಗಳಗಿರಿಯಲ್ಲಿ 10ನೇ ವರ್ಷದ ಶ್ರೀ ಗಣೇಶೋತ್ಸವ

0

ಮುಂಡೂರು: ಮುಂಡೂರು ಶ್ರೀ ಕ್ಷೇತ್ರ ಮಂಗಳಗಿರಿ ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಉದ್ಭವ ಮಹಾಗಣಪತಿ ಸನ್ನಿಧಾನದಲ್ಲಿ ಸೆ.7ರಂದು ಗಣೇಶ ಚತುರ್ಥಿ ಪ್ರಯುಕ್ತ 10ನೇ ವರ್ಷದ ಶ್ರೀ ಗಣೇಶೋತ್ಸವ ಕ್ಷೇತ್ರದ ಮೋಕ್ತೆಸರ ರಾಜೀವ ರವರ ನೇತೃದಲ್ಲಿ ವಿವಿಧ ವೈದಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬೆಳಿಗ್ಗೆ ಗಣಪತಿ ದೇವರ ವಿಗ್ರಹ ಪ್ರತಿಷ್ಠೆ, ಗಣಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.ರಾತ್ರಿ ಶ್ರೀ ನಾಗಾಂಬಿಕಾ ಭಜನಾ ಮಂಡಳಿ ಶ್ರೀ ಕ್ಷೇತ್ರ ಮಂಗಳಗಿರಿ ಇವರಿಂದ ಕುಣಿತ ಭಜನೆ ಶ್ರೀ ದೇವಿ ನಾಗಾಂಬಿಕಾ ಅಮ್ಮನವರಿಗೆ ಮಹಾಪೂಜೆ, ನಂತರ ಗಣಪತಿ ದೇವರಿಗೆ ರಂಗ ಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆದು ಗಣಪತಿ ದೇವರ ವಿಗ್ರಹ ಜಲಸ್ತಂಭನ ನಡೆಯಿತು.

ಶ್ರೀ ನಾಗಾಂಬಿಕಾ ಭಜನಾ ಮಂಡಳಿಯ ಅಧ್ಯಕ್ಷ ಸಂತೋಷ್ ಕುಮಾರ್, ಉಪಾಧ್ಯಕ್ಷ ಪ್ರಶಾಂತ್ ಆಚಾರ್ಯ, ಕಾರ್ಯದರ್ಶಿ ಜಯರಾಜ್ ಜತೆಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ, ಮಂಗಳಗಿರಿ ಸ್ವಸಹಾಯ ತಂಡದ ಅಧ್ಯಕ್ಷರು ಮತ್ತು ಸದಸ್ಯರು ಸದಸ್ಯರು, ಊರವರ, ಭಕ್ತರು ಭಾಗವಹಿಸಿ ಸಹಕರಿಸಿದರು.

LEAVE A REPLY

Please enter your comment!
Please enter your name here