ಮಲೆಬೆಟ್ಟು: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ವಿಶೇಷ ಪೂಜೆ

0

ಉಜಿರೆ: ಉಜಿರೆ ಗ್ರಾಮದ ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣ್ಯಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರಗಿತು.

ಬೆಳಿಗ್ಗೆ ಶ್ರೀ ಮಹಾಗಣಪತಿ ದೇವರಿಗೆ ಅಭಿಷೇಕ, ಪೂಜೆ, ಗಣಹೋಮ, ಮಧ್ಯಾಹ್ನ ಮಹಾಪೂಜೆ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಅಭಿಷೇಕ, ಮಹಾಪೂಜೆ ನೆರವೇರಿತು.ವೈದಿಕ ಕಾರ್ಯಕ್ರಮಗಳು ಕಿರಿಯಾಡಿ ಸದಾಶಿವ ಹೊಳ್ಳ ಇವರ ನೇತೃತ್ವದಲ್ಲಿ ನಡೆದು ಮದ್ಯಾಹ್ನ ಮಹಾ ಪೂಜೆಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಉಜಿರೆ ಲಕ್ಷ್ಮೀ ಇಂಡಸ್ಟ್ರಿಸ್ ಮಾಲಕರು ಮತ್ತು ಸಿಬ್ಬಂದಿಗಳು ಅನ್ನದಾನದ ಸೇವಾಕರ್ತರಾಗಿ ಸಹಕಾರ ನೀಡಿದರು.

ಇದೇ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಸಹಕಾರ ನೀಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಹರೀಶ್ ಕುಮಾರ್ ಇವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ನೋಟರಿ ವಕೀಲ ಶ್ರೀನಿವಾಸ ಗೌಡ ಬೆಳಾಲು, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಯಾಮಣಿ ರವೀಂದ್ರನಾಥ, ಗಣ್ಯರಾದ ಗಿರಿರಾಜ ಬಾರಿತ್ತಾಯ, ಬಾಬು ಗೌಡ ಬಾಜಿಮಾರು, ತನಿಯಪ್ಪ ಪೂಜಾರಿ ಹೊಸಮನೆ,ವಿನುತಾ ರಜತ ಗೌಡ, ದಿನೇಶ್ ಗೌಡ ಕುಲೆಂಜಿಲೋಡಿ, ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಯ್ಯ ಗೌಡ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡೊಂಬಯ್ಯ ಗೌಡ, ಕಾರ್ಯದರ್ಶಿ ಪೂವಪ್ಪ ಗೌಡ, ಭಜನಾ ಮಂಡಳಿಯ ಕಾರ್ಯದರ್ಶಿ ಬಾಲಚಂದ್ರ, ಸಮಿತಿ ಸದಸ್ಯರು ಊರ ಪರ ಊರ ಭಕ್ತರು ಭಾಗವಹಿಸಿ ಸಹಕರಿಸಿದರು.

LEAVE A REPLY

Please enter your comment!
Please enter your name here