Site icon Suddi Belthangady

ಕೊಯ್ಯೂರು ದೇವಸ್ಥಾನ ಶಾಲೆಯಲ್ಲಿ ಬೆಳ್ತಂಗಡಿ ಮತ್ತು ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ದೇವಸ್ಥಾನ ಇಲ್ಲಿ ನಡೆದ ಬೆಳ್ತಂಗಡಿ ಮತ್ತು ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ – ಬಾಲಕಿಯರ ತ್ರೋಬಾಲ್ ಪಂದ್ಯಾಟವನ್ನು ಕೊಯ್ಯೂರು ಗ್ರಾಮ ಪಂಚಾಯತು ಅಧ್ಯಕ್ಷೆ ದಯಾಮಣಿ ರವೀಂದ್ರನಾಥ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುಧಾಕರ ದೇವಾಡಿಗ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ವಿಶಾಲಾಕ್ಷಿ ಮತ್ತು ಶಾರದಾ, ಕೊಯ್ಯೂರು ಪಂಚದುರ್ಗಾ ಪರಮೇಶ್ವರಿ ದೇವಸ್ಥಾನದ ಅರ್ಚಕ ಅಶೋಕ್ ಕುಮಾರ್ ಅಗ್ರಸಾಲೆ, ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಂಘದ ಅಧ್ಯಕ್ಷ ನವೀನ್ ವಾದ್ಯ ಕೋಡಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಂತ ಕೃಷ್ಣ ಭಟ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೇಖರ ಮಾವಿನಕಟ್ಟೆ, ಪ್ರಧಾನ ಕಾರ್ಯದರ್ಶಿ ವಿನಾಯಕ ಬೆದ್ರಲ್ಕೆ, ರವಿ ಪೂಜಾರಿ ಬಜ, ಕ್ರೀಡಾ ಸಂಯೋಜಕರಾದ ಪಂಚಾಕ್ಷರಪ್ಪ ಮೊದಲಾದವರು ಉಪಸ್ಥಿತರಿದ್ದರು.

ಸಂತೋಷ್ ಆಚಾರ್ಯ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ಯಾಮಲಾ ಸ್ವಾಗತಿಸಿ, ಶಾಲಾ ಸಹಶಿಕ್ಷಕರಾದ ಮಧು.ಕೆ ಧನ್ಯವಾದವಿತ್ತರು.

Exit mobile version