Site icon Suddi Belthangady

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳ್ತಂಗಡಿ: ಹದಿಹರೆಯದ ಮಕ್ಕಳೊಂದಿಗೆ ಹೆತ್ತವರು ಸ್ನೇಹಿತರಂತಿದ್ದು ಭಾವನಾತ್ಮಕವಾದ ಸಂಬಂಧವನ್ನು ಹೊಂದಿರಬೇಕು ಎಂದು ವಾಣಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಹೇಳಿದರು.

ಅವರು ವಾಣಿ ಪದವಿಪೂರ್ವ ಕಾಲೇಜಿನ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಓದುವ ಸಮಯದಲ್ಲಿ ಪೋಷಕರು ಮಕ್ಕಳಿಗೆ ಹೆಚ್ಚು ಒತ್ತಡವನ್ನು ಹಾಕಬಾರದು. ಉತ್ತಮವಾದ ಸಂವಹನದ ಮೂಲಕ ಮಕ್ಕಳ ಸಮಸ್ಯೆಗಳನ್ನು ಬಗೆಹರಿಸಬೇಕು. ವಿಜ್ಞಾನ ವಿಷಯವನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ತಲುಪುವಲ್ಲಿ ಪೋಷಕರು ಜವಾಬ್ದಾರಿಯನ್ನು ವಹಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹರ್ಷಿತ್ ಕುಮಾರ್ ಸ್ವಾಗತಿಸಿದರು. ಉಪನ್ಯಾಸಕಿ ಗೀತಾ ವಂದಿಸಿದರು.

Exit mobile version