Site icon Suddi Belthangady

ಬೆಳಾಲು: ಮದ್ಯವರ್ಜನಾ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶ್ರೀನಿವಾಸ ಗೌಡ, ಕಾರ್ಯದರ್ಶಿಯಾಗಿ ಸುರೇಂದ್ರ, ಕೋಶಾಧಿಕಾರಿಯಾಗಿ ಸತೀಶ್ ಎಳ್ಳುಗದ್ದೆ ಆಯ್ಕೆ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಅಕ್ಟೊಬರ್ ತಿಂಗಳಲ್ಲಿ ನಡೆಯಲಿರುವ ಮದ್ಯವರ್ಜನಾ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ನೋಟರಿ ವಕೀಲ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ, ಕಾರ್ಯದರ್ಶಿಯಾಗಿ ಬೆಳ್ತಂಗಡಿ ತಾಲೂಕು ಯೋಜನೆಯ ಯೋಜನಾಧಿಕಾರಿ ಸುರೇಂದ್ರ, ಕೋಶಾಧಿಕಾರಿಯಾಗಿ ಗ್ರಾ.ಪಂ ಸದಸ್ಯ ಸತೀಶ್ ಎಳ್ಳುಗದ್ದೆ ಆಯ್ಕೆಯಾದರು.

ಗೌರವಾಧ್ಯಕ್ಷರಾಗಿ ತಾ.ಪ. ಮಾಜಿ ಅಧ್ಯಕ್ಷ ಎನ್.ಜತ್ತಣ್ಣ ಗೌಡ, ಉಪಾಧ್ಯಕ್ಷರುಗಳಾಗಿ ನಿವೃತ್ತ ಪ್ರಾದೇಶಿಕ ನಿರ್ದೇಶಕ ಸೀತಾರಾಮ್ ಶೆಟ್ಟಿ ಕೆಂಬರ್ಜೆ, ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್, ಪುಷ್ಪಾವತಿ ಆರ್. ಶೆಟ್ಟಿ ಉಜಿರೆ, ನಾರಾಯಣ ಗೌಡ ಎಳ್ಳುಗದ್ದೆ, ಪೆರಣ ಗೌಡ ಪರಾರಿ , ಶಿವಕುಮಾರ್ ಬಾರಿತಾಯ ಪಾರಳ, ವಿಜಯ ಗೌಡ ಎಸ್., ಜೊತೆ ಕಾರ್ಯದರ್ಶಿಯಾಗಿ ಉಜಿರೆ ವಲಯದ ಮೇಲ್ವಿಚಾರಕಿ ವನಿತ, ಸುಕೇಶ್ ಇವರು ಆಯ್ಕೆಯಾದರು.

ಸೆ.11ರಂದು ಜನಜಾಗೃತಿ ವೇದಿಕೆಯ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ ರವರ ಅಧ್ಯಕ್ಷತೆಯಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ ನಡೆಯಿತು.

Exit mobile version