Site icon Suddi Belthangady

ಪದ್ಮುಂಜದಲ್ಲಿ ಕುಪ್ಪೆಟ್ಟಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಪದ್ಮುಂಜ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಸಮೂಹ ಸಂಪನ್ಮೂಲ ಕೇಂದ್ರ ಕುಪ್ಪೆಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪದ್ಮುಂಜ ಇದರ ಸಂಯುಕ್ತ ಆಶ್ರಯದಲ್ಲಿ ಸೆ 13ರಂದು ಎಸ್ ಡಿ ಎಂ ಸಿ ಅಧ್ಯಕ್ಷ ಪುರುಷೋತ್ತಮ ರವರ ಅಧ್ಯಕ್ಷತೆಯಲ್ಲಿ ಪದ್ಮುಂಜದಲ್ಲಿ ಜರಗಿತು.

ಪಂ ಸದಸ್ಯರಾದ ಗಾಯತ್ರಿ ಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಸಮೂಹ ಸಂಪನ್ಮೂಲ ವ್ಯಕ್ತಿ ವಾರಿಜರವರು ಪ್ರಾಸ್ತಾವಿಕ ಬಾಷಣ ಮಾಡಿದರು. ಪಂ ಸದಸ್ಯರಾದ ಸೀತಾರಾಮ ಮಡಿವಾಳ ಸುಮತಿ ಶೆಟ್ಟಿ, ಶಿಕ್ಷಣ ಸಂಯೋಜಕಿ ಚೇತನಾಶ್ರಿ ಮಾತನಾಡಿ ಶುಭ ಹಾರೈಸಿದರು.

ತಾಲೂಕು ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಪುರುಷೋತ್ತಮ, ದಾನಿಗಳಾದ ಸದಾಶಿವ ಶೆಟ್ಟಿ ಜೋಗಿ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಗೀತಾ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಪುರಂದರ ಶೆಟ್ಟಿ, ಅಧ್ಯಾಪಕ ವೃಂದದವರು, ನೆಕ್ಕಿಲು ಶಾಲೆಯ ಮುಖ್ಯೋಪಾಧ್ಯಾಯ ಬಿ.ಎಸ್ ಬೀರಾದರ್, ಕರಾಯ ಕ್ಲಸ್ಟರ್ ಸಿ ಆರ್ ಪಿ ಮುಹಮ್ಮದ್ ಶರೀಫ್, ವಿನೋದ್ ಪೊಯ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದಾನಿಗಳಾದ ಸದಾಶಿವ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.ಮುಖ್ಯ ಶಿಕ್ಷಕಿ ಕೀರ್ತಿಯವರು ಸ್ವಾಗತಿಸಿದರು. ಅಧ್ಯಾಪಕ ಮಾದವ ಗೌಡ ಡಿ ರವರು ಕಾರ್ಯಕ್ರಮ ನಿರೂಪಿಸಿ, ಅಧ್ಯಾಪಕಿ ತೇಜಾರವರು ಧನ್ಯವಾದ ಸಲ್ಲಿಸಿದರು.

Exit mobile version