ಅರಸಿನಮಕ್ಕಿ: ಪ್ರಾ.ಕೃ.ಪ.ಸ.ಸಂಘ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

0

ಅರಸಿನಮಕ್ಕಿ: ಪ್ರಾ.ಕೃ.ಪ.ಸ.ಸಂಘ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಸಂಘದ ಸಭಾಭವನದಲ್ಲಿ ನಡೆಯಿತು.ಶಿಬಿರದ ಉದ್ಘಾಟನೆಯನ್ನು ಮಲ್ನಾಡ್ ವಸ್ತ್ರ ಭಂಡಾರ ಇದರ ಮಾಲಕ ಧರ್ಣಪ್ಪ ಗೌಡ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು

ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ಸದಸ್ಯರಾದ ಉದಯಶಂಕರ್ ರವರು ಮಾತನಾಡಿ ರಕ್ತದಾನದ ಮಹತ್ವ ಮತ್ತು ಆದರಿಂದ ನಮ್ಮ ದೇಹಕ್ಕೆ ಆಗುವ ಪ್ರಯೋಜನ ಮತ್ತು ಸಂಘದ ಮತ್ತು ಆಯೋಜನೆಗೆ ಸಹಕರಿಸುತ್ತಿರುವ ಅರಸಿನಮಕ್ಕಿ -ಶಿಶಿಲ ಶೌರ್ಯ ವಿಪತ್ತು ಘಟಕದ ಉತ್ತಮ ಕೆಲಸಗಳ ಬಗ್ಗೆ ಮಾತನಾಡಿದರು.

ವೇದಿಕೆಯಲ್ಲಿ ಸೇವಾಧಾಮದ ಸ್ಥಾಪಕರಾದ ಕೆ ವಿನಾಯಕ, ಡಾ. ಹರ್ಷಿತ ಸುವಿನ್, ರಕ್ತ ನಿಧಿ ವಿಭಾಗದ ಜಿಲ್ಲಾ ಸಂಯೋಜಕರಾದ ಪ್ರವೀಣ್ ಕುಮಾರ್, ಸಂಘದ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ರವಿಚಂದ್ರ ರಾವ್, ಶಿಬಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನ ಬಿ, ರೋಟರಿ ಕ್ಯಾoಪ್ಕೋ ಬ್ಲಡ್ ಬ್ಯಾಂಕ್ ನ ಮೆಡಿಕಲ್ ಆಫೀಸರ್ ಡಾ. ಕೆ ಸೀತಾರಾಮ್ ಭಟ್ ಉಪಸ್ಥಿತರಿದ್ದರು.

ಸ್ವಾಗತವನ್ನು ನಿರ್ದೇಶಕರಾದ ಮುರಳಿಧರ್ ಶೆಟ್ಟಿಗಾರ್, ನಿರೂಪಣೆಯನ್ನು ಸೇವಾಧಾಮದ ಸಿಬ್ಬಂಧಿ ಮೋಹನ್, ಧನ್ಯವಾದವನ್ನು ಸಂಘದ ಅಧ್ಯಕ್ಷರಾದ ರಾಘವೇಂದ್ರ ನಾಯಕ್ ನೆರವೇರಿಸಿದರು.

LEAVE A REPLY

Please enter your comment!
Please enter your name here