ಧರ್ಮಸ್ಥಳ: ಆಟೋ ರಿಕ್ಷಾಕ್ಕೆ ಗುದ್ದಿದ ಆಂದ್ರ ಮೂಲದ ಕಾರು – ಕಾರು ಚಾಲಕ ಪರಾರಿ- ಪ್ರಯಾಣಿಕರಿಗೆ ಗಂಭೀರ ಗಾಯ

0

ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಆದೀಶ್ ವಸತಿ ಗೃಹದ ಸಮೀಪದಲ್ಲಿ ಸೆಪ್ಟೆಂಬರ್ 15 ರಂದು ಬೆಳಗ್ಗಿನ ಜಾವವೇ ಅಪಘಾತ ಸಂಭವಿಸಿದೆ. ಉಜಿರೆಯಿಂದ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಆಟೋ ರಿಕ್ಷಾಕ್ಕೆ, ಅದೇ ದಿಕ್ಕಿನಲ್ಲಿ ಬರುತ್ತಿದ್ದ ಆಂಧ್ರಪ್ರದೇಶ ನೋಂದಣಿ ಸಂಖ್ಯೆಯ ಮಾರುತಿ ಬ್ರಿಜ್ಜಾ ಕಾರು ಓವರ್ ಟೆಕ್ ಮಾಡುವ ಸಂದರ್ಭದಲ್ಲಿ ರಿಕ್ಷಾದ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ರಿಕ್ಷಾಕ್ಜೆ ಢಿಕ್ಕಿ ಹೊಡೆದ ನಂತರ ಕಾರಿನ ಚಾಲಕ ಅಲ್ಲಿಂದ ಕಾಲ್ಕಿತ್ತಿದ್ದು ಹಿಟ್ ಅಂಡ್ ರನ್ ಕೇಸ್ ದಾಖಲಾಗಿದೆ.

ಆಟೋ ರಿಕ್ಷದಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಾಳುಗಳನ್ನು ಪುಂಜಲಕಟ್ಟೆ ಸಮೀಪದ ನಿವಾಸಿಗಳು ಎಂದು ಮಾಹಿತಿ ಲಭ್ಯವಾಗಿದೆ. ಇನ್ನು, ಕಾರನ್ನು ನೇತ್ರಾವತಿ ಸಮೀಪದ ಅಜುಕುರಿ ಎಂಬಲ್ಲಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದು ಸ್ಥಳೀಯರು ಕಾರನ್ನು ಪತ್ತೆ ಹಚ್ಚಿ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here