Site icon Suddi Belthangady

ಬಂದಾರು: ಮೈರೋಳ್ತಡ್ಕದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಆಟೋಟ ಸ್ಪರ್ಧೆ, ನೃತ್ಯ ಭಜನಾ ಸೇವೆ

ಬಂದಾರು: ಮೈರೋಳ್ತಡ್ಕ ಸದಾಶಿವ ಯುವಕ ಮಂಡಲ ಮತ್ತು ದಿವ್ಯಶ್ರೀ ಮಹಿಳಾ ಮಂಡಲದ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಸೆ 15 ರಂದು ಜರುಗಿತು. ಈ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆ ಸೇರಿದಂತೆ ಶ್ರೀ ಕುರಾಯ ಸದಾಶಿವ ಮಕ್ಕಳ ಭಜನಾ ತಂಡದಿಂದ ನೃತ್ಯ ಭಜನೆ ಕಾರ್ಯಕ್ರಮ ನಡೆಯಿತು

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರಧಾನ ಅರ್ಚಕ ರವಿ ಭೀಮ್ ಭಟ್ ರವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ, ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ ಮಲ್ಲಕಂಬ ಸ್ಪರ್ಧೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಉಪಸ್ಥಿತರಿದ್ದರು. ಇನ್ನು ಶಾಲಾ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆ, ಹಾಗು ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಯುವಕ ಮಂಡಲ ಅಧ್ಯಕ್ಷರು, ಕಾರ್ಯದರ್ಶಿ ಪದಾಧಿಕಾರಿಗಳು ಸರ್ವ-ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಕಾರಣರಾದರು.

Exit mobile version