Site icon Suddi Belthangady

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಹಿಂದಿ ದಿನಾಚರಣೆ

ಬೆಳ್ತಂಗಡಿ: ದೇಶದ ಬಹಳಷ್ಟು ಜನರು ಮಾತನಾಡುವ ಹಿಂದಿ ಭಾಷೆ ಒಂದು ಶ್ರೀಮಂತ ಭಾಷೆಯಾಗಿದೆ ಎಂದು ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿಂದಿ ಶಿಕ್ಷಕಿ ಯೋಗಿನಿ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ ಕುರಿತು ಮಾತನಾಡುತ್ತ, ಹಿಂದಿ ಭಾಷೆ ಭಾರತದ ವಿವಿಧ ರಾಜ್ಯಗಳ ಮತ್ತು ಪ್ರದೇಶಗಳ ನಡುವೆ ಉತ್ತಮ ಸಂವಹನವನ್ನು ಮಾಡುವ ಶಕ್ತಿಯಾಗಿದೆ. ರಾಷ್ಟ್ರೀಯ ಎಲ್ಲಾ ವಿಚಾರಗಳನ್ನು ತಿಳಿಯಲು ಅಥವಾ ವ್ಯವಹರಿಸಲು ಹಿಂದಿ ಭಾಷೆ ಉತ್ತಮ ಮಾಧ್ಯಮವಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಹಿಂದಿ ಉಪನ್ಯಾಸಕಿ ರಮ್ಯಾ ಜೋಶಿ ಸ್ವಾಗತಿಸಿದರು. ದಿವಿಜ್ ಧನ್ಯವಾದವಿತ್ತರು.ಡೆಲಿಷಾ ಮೋನಿಸ್ ಕಾರ್ಯಕ್ರಮ ನಿರೂಪಿಸಿದರು.

Exit mobile version