Site icon Suddi Belthangady

ಬಂದಾರು: ಪೆರ್ಲ-ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸಮಾಲೋಚನಾ ಸಭೆ

ಬಂದಾರು: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮುಂದಿನ ಜ.8ರಿಂದ ಜ.12ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸಮಾಲೋಚನಾ ಸಭೆ ಸೆ.15ರಂದು ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ರಮೇಶ ಗೌಡ ಅಡ್ಡಾರು ವಹಿಸಿದ್ದರು.ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೋಕ್ತೆಸರ ಶರತ್‌ ಕೃಷ್ಣ ಪಡ್ಡೆಟ್ನಾಯ ಮಾರ್ಗದರ್ಶನ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ಪೂಜಾರಿ ಬಜೆ ಗೌರವ ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.ಆನುವಂಶಿಕ ಆಡಳಿತ ಮೋಕ್ತೆಸರ ಕುಕ್ಕಪ್ಪ ಗೌಡ, ಅರ್ಚಕ ಅನಂತರಾಮ ಶಬರಾಯ, ಭಜನಾ ಮಂಡಳಿಯ ಅಧ್ಯಕ್ಷ ಲಕ್ಷ್ಮಣ ಗೌಡ, ಆಡಳಿತ ಮಂಡಳಿ ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿ ಮಜಲು, ಸಮಿತಿ ಸದಸ್ಯರು, ಊರ ಗಣ್ಯರು ಭಕ್ತರು ಉಪಸ್ಥಿತರಿದ್ದರು.

ಬಳಿಕ ಬ್ರಹ್ಮಕಲಶೋತ್ಸವ ಸಮಿತಿ ರಚನೆ ಮಾಡಲಾಯಿತು.ತಾಲೂಕು ಪಂಚಾಯತ್ ಮಾಜಿ ಸದಸ್ಯಮಹಾಬಲ ಗೌಡ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.ಆಡಳಿತ ಮಂಡಳಿ ಸದಸ್ಯೆ ಯಶೋಧಾ ಅಡ್ಯಾರು ವಂದಿಸಿ, ಶೀನಪ್ಪ ಗೌಡ ಮತ್ತು ಸತೀಶ್ ಗೌಡ ಬಾಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.

Exit mobile version