Site icon Suddi Belthangady

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕದ ರಬ್ಬರ್ ತೋಟದಲ್ಲಿ ಹಾರಿತ್ತಕಜೆ ನಿವಾಸಿ ಸಾವು

ಕಾಯರ್ತಡ್ಕ: ಯಂತ್ರದ ಮೂಲಕ ರಬ್ಬರ್ ತೋಟದ ಕಾಡು ತೆಗೆಯುತ್ತಿದ್ದಾಗ ರಬ್ಬರ್ ಮರಕ್ಕೆ ಕಪ್‌ ಸಿಲುಕಿಸುವ ರಿಂಗ್ ಎದೆಗೆ ಬಡಿದು ಗಂಭೀರ ಗಾಯಗೊಂಡ ಹಾರಿತ್ತಕಜೆ ನಿವಾಸಿ ಕೊರಗಪ್ಪ ಗೌಡ (56) ಎಂಬವರು ಮೃತಪಟ್ಟಿದ್ದಾರೆ.

ಸೆ.17ರಂದು ಬೆಳಗ್ಗೆ ಬೈದಿಕಜೆ ಎಂಬಲ್ಲಿ ರಬ್ಬರ್ ತೋಟದ ಕಳೆ ತೆರವುಗೊಳಿಸುತ್ತಿದ್ದಾಗ ಘಟನೆ ನಡೆದಿದೆ. ಕಳೆ ತೆಗೆಯುವ ಯಂತ್ರಕ್ಕೆ ಸಿಕ್ಕಿದ ಕಬ್ಬಿಣದ ಸರಿಗೆಯ ರಿಂಗ್ ವೇಗವಾಗಿ ಎದೆಗೆ ಬಡಿದು ಆಳವಾದ ಗಾಯವಾಗಿತ್ತು. ತಕ್ಷಣ ಆಸ್ಪತ್ರೆಗೆ ಸಾಗಿಸುವ ಪ್ರಯತ್ನವನ್ನು ಸ್ಥಳೀಯರು ಮಾಡಿದರೂ, ದಾರಿಮಧ್ಯೆ ಕೊನೆಯುಸಿರೆಳೆದರು.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಲಲಿತಾ, ಮಕ್ಕಳಾದ ಹರ್ಷಿತ್, ಪ್ರವೀಣ್‌ರನ್ನು ಅಗಲಿದ್ದಾರೆ.

Exit mobile version