Site icon Suddi Belthangady

ಉಜಿರೆ: ಗ್ರಾಮ ಪಂಚಾಯತಿನಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನ

ಉಜಿರೆ: ಬೆಳ್ತಂಗಡಿ ತಾಲೂಕು ಮಟ್ಟದ ವಿಶೇಷ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಸೆ.17ರಂದು ಜರುಗಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಅವರ ಅಧ್ಯಕ್ಷತೆ ವಹಿಸಿದ್ದರು.ಕರ್ನಾಟಕ ವಿಧಾನ ಪರಿಷತ್ತು ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮದ ರೂಪುರೇಷೆಗಳನ್ನು ವಿವರಿಸಿದರು.ಬಳಿಕ ಹಸಿರು ಬಾವುಟ ಪ್ರದರ್ಶಿಸಿ ಸ್ವಚ್ಛತಾ ಜಿ ಸೇವಾ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ, ಕಾಲ್ನಡಿಗೆ ಜಾಥಾ ಕಾರ್ಯಕ್ರಮ ಜರುಗಿತು.

ಪಿಡಿಒ ಪ್ರಕಾಶ್ ಶೆಟ್ಟಿ ಸ್ವಾಗತಿಸಿ, ತಾಲೂಕು ಸಂಯೋಜಕ ಜಯಾನಂದ ಅವರು ವಂದಿಸಿದರು.

ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಸದಸ್ಯರು, ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಮತ್ತು ಪದಾಧಿಕಾರಿಗಳು, ಎಸ್ ಡಿ ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ಸಿಬ್ಬಂದಿಗಳು, ಗ್ರಾಮಸ್ಥರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Exit mobile version