ಕಡಿರುದ್ಯಾವರ: ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

0

ಕಡಿರುದ್ಯಾವರ: ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ ಮಾರ್ಗದರ್ಶಿ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಹಿರಿಯ ಗ್ರಾಮ ಸಂಪನ್ಮೂಲ ವ್ಯಕ್ತಿ ಲೀಲಾವತಿ ಎಸ್ ರವರು ಪ್ರಾಸ್ತಾವಿಕ ಮಾತನಾಡಿದರು. ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ವಿದ್ಯಾಶ್ರೀ. ಜಿ, ಈಶ್ವರಿಯವರು ಅನುದಾನದ ಬಿಡುಗಡೆ, ಖರ್ಚಿನ ಪಟ್ಟಿಯನ್ನು ಸಭೆಗೆ ಮಂಡಿಸಿದರು.

ಸಭೆಯಲ್ಲಿ ಶಾಲಾ ಅನುದಾನದ, ಮೂಲಭೂತ ಸೌಕರ್ಯಗಳಾದ ಕಟ್ಟಡ ದುರಸ್ತಿ, ಶಿಕ್ಷಕರ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಮಾರ್ಗದರ್ಶಿ ಅಧಿಕಾರಿ ಹೇಮಚಂದ್ರ, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಗ್ರಾ. ಪಂ ಅಧ್ಯಕ್ಷರು ರತ್ನಾವತಿ, CRP ಶಿಕ್ಷಣ ಇಲಾಖೆ ಪ್ರಶಾಂತ್ ಪೂಜಾರಿ, ಶಾಲಾ SDMC ಅಧ್ಯಕ್ಷರು ರಾಘವೇಂದ್ರ ಪಟವರ್ಧನ್, ಶಾಲಾ ಮುಖ್ಯ ಶಿಕ್ಷಕಿ ಫಿಲೋಮಿನಾ, ಶಾಲಾ ನಾಯಕ ಹಂಶಿತ್, ಹಾಗೂ ಪೋಷಕರು ಉಪಸ್ಥಿತರಿದ್ದರು.

ಸಭೆಯು ನಾಡಗೀತೆಯೊಂದಿಗೆ ಸಭೆ ಪ್ರಾರಂಭವಾಗಿ ಶಾಲಾ ಮುಖ್ಯ ಶಿಕ್ಷಕಿಯವರು ಸ್ವಾಗತಿಸಿ, ಸಭೆಯ ಕೊನೆಗೆ ವಂದಿಸಿದ ನಂತರ ರಾಷ್ಟ್ರಗೀತೆಯೊಂದಿಗೆ ಸಭೆ ಮುಕ್ತಾಯವಾಯಿತು.

LEAVE A REPLY

Please enter your comment!
Please enter your name here