Site icon Suddi Belthangady

ಧರ್ಮಸ್ಥಳ: ಗ್ರಾಮ ಪಂಚಾಯತ್ ವತಿಯಿಂದ ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯಿತಿನಲ್ಲಿ ಸ್ವಚ್ಛತಾ ಹೀ ಸೇವಾ 2024 ಕಾರ್ಯಕ್ರಮವನ್ನು ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯಿತ್ ಅಧ್ಯಕ್ಷೆ ವಿಮಲಾ, ಉಪಾಧ್ಯಕ್ಷ ಪಿ. ಶ್ರೀನಿವಾಸರಾವ್, ಉಜಿರೆ ಎಸ್. ಡಿ.ಎಂ.ಕಾಲೇಜು ರಾಷ್ಟ್ರೀಯ ಸೇವಾ ವಿಭಾಗದ ಅಧಿಕಾರಿ ಮಹೇಶ್ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನ ಮ್ಯಾನೇಜರ್ ಲಕ್ಷ್ಮೀನಾರಾಯಣ ರಾವ್, ಧರ್ಮಸ್ಥಳ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಡಿ , ಎಸ್‌.ಡಿ.ಎಂ. ಕಾಲೇಜ್ ಪ್ರೊಫೆಸರ್ ದೀಪ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ , ಪಂಚಾಯತ್ ಸದಸ್ಯ ಸುಧಾಕರ್, ಲೆಕ್ಕಸಹಾಯಕಿ ಪ್ರಮೀಳಾ, ದೇವಸ್ಥಾನದ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ರಾಷ್ಟ್ರೀಯ ಸೇವಾ ವಿಭಾಗದ ವಿದ್ಯಾರ್ಥಿಗಳು, ಊರವರು ಉಪಸ್ಥಿತರಿದ್ದರು.

Exit mobile version