ಮಡಂತ್ಯಾರು: ರಾಜ್ಯಕ್ಕೆ ಕೀರ್ತಿ ತಂದುಕೊಟ್ಟ ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್ ಸಿ ಸಿ ಕೆಡೆಟ್

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್.ಸಿ.ಸಿ ಘಟಕದ ಸಿಕ್ಯೂಎಂಎಸ್ ವಿಸ್ಮಯಾ ಹಾಗೂ ಸಿಡಿಟಿ ಅಭಿಷೇಕ್ ದೆಹಲಿಯಲ್ಲಿ ನಡೆದ ರಾಷ್ಟೀಯ ಮಟ್ಟದ ಶಿಬಿರಕ್ಕೆ ಆಯ್ಕೆಯಾಗಿ ನಮ್ಮ ರಾಜ್ಯಕ್ಕೆ ಹೆಮ್ಮೆಯ ತಂದುಕೊಟ್ಟಿದ್ದಾರೆ. ಕರ್ನಾಟಕದಲ್ಲಿ SW’s ದ್ವಿತೀಯ ಸ್ಥಾನ ಮತ್ತು SD’s ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಸಿಕ್ಯೂಎಂಎಸ್ ವಿಸ್ಮಯಾ ಇವರು ತೃತೀಯ ಬಿಕಾಂನಲ್ಲಿ ವ್ಯಾಸಂಗ ಮಾಡುತ್ತಿದ್ದು, ಇವರು ಕರ್ನಾಟಕದಲ್ಲಿ ಮ್ಯಾಪ್ ರೀಡಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಸಿಡಿಟಿ ಅಭಿಷೇಕ್ ಇವರು ದ್ವಿತೀಯ ಬಿಸಿಎನಲ್ಲಿ ವ್ಯಾಸಂಗ ಮಾಡುತ್ತಿದ್ದು, ಇವರು ಕರ್ನಾಟಕ ಹಾಗೂ ಗೋವಾವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ರಾಷ್ಟಿಯ ಮಟ್ಟದಲ್ಲಿ ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರಿನ ಎನ್.ಸಿ.ಸಿ ಘಟಕ ಹಾಗೂ 18 KAR BN ಪ್ರತಿನಿಧಿಸಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕವನ್ನು ಮಿಂಚಿಸಿದ್ದಾರೆ. ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಸೇಕ್ರೆಡ್ ಹಾರ್ಟ್ ಎನ್.ಸಿ.ಸಿ ಘಟಕಕ್ಕೆ ಕೀರ್ತಿಯನ್ನು ತಂದಿರುತ್ತಾರೆ.

ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್.ಸಿ.ಸಿ ಘಟಕವು ಪ್ರತಿಭಾನ್ವಿತ ಕೆಡೆಟ್ ಗಳನ್ನು ನಿರಂತರವಾಗಿ ಪ್ರೋತ್ಸಾಹಿಸಿ ಬೆಳೆಸುತ್ತಾ ಬಂದಿದೆ. ಮತ್ತು ಈ ಆಯ್ಕೆಯು ಘಟಕದ ಸಮರ್ಪಣೆ ಮತ್ತು ಶ್ರೇಷ್ಠತೆಗೆ ಸಾಕ್ಷಿಯಾಗಿದೆ.

LEAVE A REPLY

Please enter your comment!
Please enter your name here