Site icon Suddi Belthangady

ಮೈಸೂರಿನಲ್ಲಿ ಅಂತರ್ ಜಿಲ್ಲಾ ಅಥ್ಲೆಟಿಕ್ಸ್: ಮುಂಡಾಜೆಯ ತೇಜಲ್‌ಗೆ ಚಿನ್ನದ ಪದಕ

ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿ ತೇಜಲ್ ಕೆ.ಆರ್. 20 ವರ್ಷ ವಯೋಮಿತಿಯ ವಿಭಾಗದ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ ಪಡೆದು, ಪಾಂಡಿಚೇರಿಯಲ್ಲಿ ನಡೆಯುವ ದಕ್ಷಿಣ ವಲಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಮುಂಡಾಜೆ ನಿವಾಸಿ, ರಾಷ್ಟ್ರೀಯ ಮಟ್ಟದ ಕ್ರೀಡಾಪಟುವಾಗಿದ್ದ ರಾಜೇಶ್ ಕೆ.ವಿ – ಜಿನ್ಸಿ ದಂಪತಿ ಪುತ್ರ ತೇಜಲ್ ಆಳ್ವಾಸ್ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಯಾಗಿದ್ದು, ಆಳ್ವಾಸ್‌ನ ಶಾಂತಾರಾಮ್ ತರಬೇತಿ ನೀಡಿದ್ದರು. ತೇಜಲ್ 2022ರಲ್ಲಿ ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಟದಲ್ಲಿ 16 ವಯೋಮಾನ ವಿಭಾಗದ ಹರ್ಡಲ್ಸ್‌ನಲ್ಲಿ ರಾಜ್ಯ ದಾಖಲೆಯೊಂದಿಗೆ ಚಿನ್ನದ ಪದಕ, ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ, 2022-23ರ ಕರ್ನಾಟಕ ಜೂನಿಯರ್ ಅಥ್ಲೆಟಿಕ್ಸ್‌ನಲ್ಲಿ 18 ವರ್ಷ ವಯೋಮಿತಿಯಲ್ಲಿ ಬೆಳ್ಳಿ ಪದಕ ಸಹಿತ ರಾಜ್ಯಮಟ್ಟದ ಹಲವು ಕ್ರೀಡಾಕೂಟಗಳಲ್ಲಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿಯೂ ಭಾಗವಹಿಸಿದ್ದಾರೆ.

Exit mobile version