Site icon Suddi Belthangady

ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಖಂಡನೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆಯು ಬೆಳ್ತಂಗಡಿ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಪದಾಧಿಕಾರಿಗಳೊಂದಿಗೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಒಳಗೆ ವಾಸಿಸುತ್ತಿರುವ ಬುಡಕಟ್ಟು ಕುಟುಂಬದ ಹಲವಾರು ಸಮಸ್ಯೆಗಳನ್ನು ಆಲಿಸಿದರು. ಬುಡಕಟ್ಟು ಕುಟುಂಬ ಎದುರಿಸುತ್ತಿರುವ ವಿದ್ಯುತ್‌ ಸಮಸ್ಯೆ, ರಸ್ತೆ ಸಮಸ್ಯೆ, ಭೂ ಒಡೆತನದ ಬಗ್ಗೆ ಸಂವಾದವನ್ನು ನಡೆಸಿ ಮುಂದಿನ ದಿನದಲ್ಲಿ ಬೆಳ್ತಂಗಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮಾವೇಶವನ್ನು ನಡೆಸಿ ಈ ಎಲ್ಲಾ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಪಟ್ಟ ಮಂತ್ರಿಗಳನ್ನು ಕರೆಸಿ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಪರಿಶಿಷ್ಟ ಪಂಗಡದಿಂದ ಸರ್ಕಾರ ನಾಮನಿರ್ದೇಶಿತ ಸದಸ್ಯರಾಗಿ ಅಯ್ಕೆಯಾಗಿರುವ ಸದಸ್ಯರನ್ನು ಅಭಿನಂದಿಸಲಾಯಿತು.

ಖಂಡನ ನಿರ್ಣಯ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಸವಣಾಲು ಗ್ರಾಮದ ಹನ್ಯಾಡಿ ಪಿಲಿಕಲ ರಸ್ತೆ ದುರಸ್ತಿ ವೀಕ್ಷಣೆ ಮಾಡುತ್ತಿದ್ದ ವೇಳೆ ಅದಿವಾಸಿ ಸಮುದಾಯದವರು ಶಾಸಕರನ್ನು ಪ್ರಶ್ನೆ ಮಾಡಿದ ಸಂದರ್ಭದಲ್ಲಿ ನಾಯಿದ ಬಾಲೆಲು ಎಂಬ ನಿಂದನಾತ್ಮಕ ಪದ ಬಳಸಿದನ್ನು ಈ ಸಭೆಯಲ್ಲಿ ಖಂಡಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ನಾರಾಯಣ ನಾಯ್ಕ್ ,ಜಿಲ್ಲಾ ಸಂಯೋಜಕರಾದ ಚಿತ್ತರಂಜನ್ ಶೆಟ್ಟಿ ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಎಮ್ ನಾಗೇಶ್ ಕುಮಾರ್ ಗೌಡ ,ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಜಿಲ್ಲಾ ಅರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಜಯರಾಮ್ ಎಮ್ ಕೆ, ಬೆಳ್ತಂಗಡಿ ನಗರ ಸಮಿತಿ ಅಧ್ಯಕ್ಷರಾದ ಜಯನಂದ ಪಿ,ಗ್ರಾಮೀಣ ಅಧ್ಯಕ್ಷರಾದ ಜಿನ್ನಪ್ಪ ನಾಯ್ಕ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ, ತಾಲೂಕು ಅರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸವಿತಾ ,ತಾಲೂಕು ಆರಾಧನಾ ಸಮಿತಿಯ ಸದಸ್ಯರಾದ ಲಕ್ಷಣ್ ಮಲೆಕುಡಿಯ,ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಕೇಶವ ನಾಯ್ಕ್ ಒಡಿಲ್ನಾಳ ಹಾಗೂ ಸಮಿತಿ ಪ್ರಮುಖರು ಸದಸ್ಯರು ಉಪಸ್ಥಿತರಿದ್ದರು.

Exit mobile version