ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ 39ನೇ ವಾರ್ಷಿಕ ಸಾಮಾನ್ಯ ಸಭೆ: ರೂ.15 ಲಕ್ಷ ಲಾಭ, ಸದಸ್ಯರಿಗೆ ಶೇ.65 ಬೋನಸ್, ಶೇ.25 ಡಿವಿಡೆಂಡ್

0

ಮದ್ದಡ್ಕ: ಮದ್ದಡ್ಡ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ ಮದ್ದಡ್ಕ ಸುವರ್ಣ ಸೌಧ ಸಭಾ ಭವನದಲ್ಲಿ ಸೆ.19ರಂದು ಸಂಘದ ಅಧ್ಯಕ್ಷ ಕೆ.ಗೋಪಾಲ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದಲ್ಲಿ ರೂ.15ಲಕ್ಷ ಲಾಭ ಗಳಿಸಿ ಸದಸ್ಯರಿಗೆ ಶೇ.65 ಬೋನಸ್, ಶೇ.25 ಡಿವಿಡೆಂಡ್ ಘೋಷಿಸಿದರು.

ಉಪಾಧ್ಯಕ್ಷ ವಿವೇಕಾನಂದ ಸಾಲ್ಯಾನ್, ನಿರ್ದೇಶಕರುಗಳಾದ ಅಣ್ಣಿ ಶೆಟ್ಟಿ, ಚಿದಾನಂದ ಕೆ.ಪಿ., ರಮೇಶ್ ಪೂಜಾರಿ, ವಿನೋದ ಶೆಟ್ಟಿ, ರಮೇಶ್ ಪೂಜಾರಿ, ಮೋಹನ್ ನಾಯ್ಕ, ಶಿವಪ್ಪ ಗೌಡ, ಶಶಿಕಲಾ, ಕಾಂತಪ್ಪ ಮೂಲ್ಯ, ರುದೇಶ್ ಕುಮಾರ್, ನಾರಾಯಣ ಮೂಲ್ಯ, ವಸಂತಿ ಕಾರ್ಯದರ್ಶಿ ಪವಿತ್ರಾ, ಸಿಬ್ಬಂದಿ ವರ್ಗ ಪ್ರಶಾಂತ್ ನಾಯಕ್, ಗಣೇಶ್ ಗೌಡ, ಎಂ.ಶೋಭಾ, ಪ್ರಶಾಂತ್ ಕೆ., ವಿಜೇತ್, ಹೇಮಾವತಿ ಸಹಕರಿಸಿದರು.

ನಿರ್ದೇಶಕ ವಿವೇಕಾನಂದ ಸಾಲ್ಯಾನ್ ಸ್ವಾಗತಿಸಿ, ಕಾರ್ಯದರ್ಶಿ ಪವಿತ್ರ ವರದಿ, ಲೆಕ್ಕ ಪತ್ರ ಮಂಡಿಸಿ ನಿರ್ದೇಶಕ ರಮೇಶ್ ವಂದಿಸಿದರು.

ಸನ್ಮಾನ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

LEAVE A REPLY

Please enter your comment!
Please enter your name here