ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

0

ಗುರಿಪಳ್ಳ: ಇಲ್ಲಿಯ ಕೊಡೆಕ್ಕಲ್ ನಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ತಾಲೂಕಿನಾದ್ಯಂತ ಮಹಿಳೆಯರ ಬಲವರ್ಧನೆಯ ಗುರಿಯೊಂದಿಗೆ ಸ್ವಸಹಾಯ ಸಂಘವನ್ನು ಆರಂಭಿಸಲಾಗುತ್ತಿದ್ದು ಅದರಂತೆ ಇದೀಗ ಗುರಿಪಳ್ಳದ ಕೊಡೆಕ್ಕಲ್, ನೂಚಿಲ ಪರಿಸರದ ಮಹಿಳೆಯರು ಒಟ್ಟು ಸೇರಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘವನ್ನು ರಚಿಸಿ ಉದ್ಘಾಟಿಸಲಾಯಿತು.

ಹಿರಿಯರಾದ ವೆಂಕಪ್ಪ ಪೂಜಾರಿ ಕೊಡೆಕ್ಕಲ್ ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಂ.ಕೆ.ಪ್ರಸಾದ್ ಸ್ವಸಹಾಯ ಸಂಘದ ಕಾರ್ಯಶೈಲಿಯ ಬಗ್ಗೆ ಮಾಹಿತಿ ನೀಡಿದರು.

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕ ಗುರುರಾಜ್ ಗುರಿಪಳ್ಳ, ಯುವ ಬಿಲ್ಲವ ವೇದಿಕೆ ಪ್ರ.ಕಾರ್ಯದರ್ಶಿ ಸಂತೋಷ್ ಸಾಲಿಯಾನ್ ಅರಳಿ ಶುಭ ಹಾರೈಸಿದರು.

ಸ್ವಸಹಾಯ ಸಂಘದ ಅಧ್ಯಕ್ಷರಾಗಿ ಮೋಹಿನಿ, ಕಾರ್ಯದರ್ಶಿಯಾಗಿ ಸವಿತಾ, ಕೋಶಾಧಿಕಾರಿಯಾಗಿ ಪ್ರತಿಭಾ ಆಯ್ಕೆಯಾದರು.

ಸಂಘದ ಸದಸ್ಯೆ ಅನಿತಾ ಸ್ವಾಗತಿಸಿ, ದೇವಕಿ ವಂದಿಸಿದರು.

LEAVE A REPLY

Please enter your comment!
Please enter your name here