Site icon Suddi Belthangady

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ

ಬೆಳಾಲು: ಇಲ್ಲಿಯ ಮಾಯಾ ಅಂಗನವಾಡಿ ಕೇಂದ್ರದಲ್ಲಿ ಸೆ.20ರಂದು ಪೋಷಣಾ ಅಭಿಯಾನ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಪ್ರೌಢ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ನಡೆಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಲಲಿತಾ ಆರೋಗ್ಯದ ಬಗ್ಗೆ ಪೌಷ್ಟಿಕಾಂಶದ ಬಗ್ಗೆ ಉತ್ತಮ ಮಾಹಿತಿ ನೀಡಿದರು.

ಸಂಘದ ಸದಸ್ಯರು ವಿವಿಧ ರೀತಿಯ ಪೋಷಕಾಂಶವಿರುವ ತಿಂಡಿಗಳನ್ನು ತಂದು ಕಾರ್ಯಕ್ರಮದಲ್ಲಿ ಇಡಲಾಯಿತು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಯಶೋಧ, ಮಾಯಾ ಪ್ರಾಥಮಿಕ ಶಾಲಾ ಅಧ್ಯಾಪಕಿ ಜಾನ್ಸಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಮಧುರ, ಗೊಂಚಲು ಅಧ್ಯಕ್ಷೆ ಗೀತಾ, ಕೃಷಿ ಸಖಿ ಸ್ವಾತಿ, ಪಶು ಸಖಿ ಯಶೋಧ, ಪೋಷಕರು ಪುಟಾಣಿ ಮಕ್ಕಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಲೋಕಮ್ಮ ಸ್ವಾಗತಿಸಿ, ಎಂಬಿಕೆ ಹರಿಣಾಕ್ಷಿ ನಿರೂಪಿಸಿದರು. ಅಂಗನವಾಡಿ ಸಹಾಯಕಿ ಸುಜಾತಾ ಸಹಕರಿಸಿದರು.

Exit mobile version