Site icon Suddi Belthangady

ಮುಂಡಾಜೆಯಲ್ಲಿ ಉಜಿರೆ ವಲಯ ಮಟ್ಟದ ಖೋಖೋ ಪಂದ್ಯಾಟ

ಉಜಿರೆ ವಲಯ ಮಟ್ಟದ ಖೋಖೋ ಪಂದ್ಯಾಟ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಮುಂಡಾಜೆಯಲ್ಲಿ ಜರುಗಿತು.

ವಲಯದ ಸಂಪನ್ಮೂಲ ವ್ಯಕ್ತಿ ಪ್ರಶಾಂತ್ ಪೂಜಾರಿ ಪಂದ್ಯಾಟವನ್ನು ಉದ್ಘಾಟಿಸಿ ಪಾಠದೊಂದಿಗೆ ಆಟದ ಪ್ರಾಮುಖ್ಯತೆ ಬಗ್ಗೆ ತಿಳಿ ಹೇಳುವುದರೊಂದಿಗೆ ಶುಭ ಹಾರೈಸಿದರು.

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯ ಚಂದ್ರ ಇವರು ಅಧ್ಯಕ್ಷೀಯ ನುಡಿಗಳೊಂದಿಗೆ ಶುಭಹಾರೈಸಿದರು. ಮುಖ್ಯ ಶಿಕ್ಷಕಿ ಚಂದ್ರಮತಿ ಸ್ವಾಗತಿಸಿದರು.ದೈಹಿಕ ಶಿಕ್ಷಕ ಬಾಲಕೃಷ್ಣ ವಂದಿಸಿದರು.

ಈ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು, ಮುಂಡಾಜೆ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದರು.

ಬಾಲಕಿಯರ ವಿಭಾಗದಲ್ಲಿ ಮುಂಡಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರು ಪ್ರಥಮ ಸ್ಥಾನವನ್ನು, ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಹಂಚಿಕೊಂಡರು.

ನಮ್ಮ ಸಂಸ್ಥೆಗಳ ದೈಹಿಕ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ನಿರಂಜನ್ ಜೈನ್ ಮತ್ತು ವಲಯ ಕ್ರೀಡಾ ಸಂಯೋಜಕ ರವಿ ಹಾಗೂ ವಲಯದ ಎಲ್ಲ ದೈಹಿಕ ಶಿಕ್ಷಕರ ಸಹಕಾರದೊಂದಿಗೆ ಖೋಖೋ ಪಂದ್ಯಾಟ ನೆರವೇರಿತು.

Exit mobile version