ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ನೂತನ ಪದಾಧಿಕಾರಿಗಳ ಆಯ್ಕೆ

0

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘದ 2024-26ರ ಸಾಲಿನ  ಮಹಿಳಾ ವಿಭಾಗದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಪ್ಟೆಂಬರ್ 22ರಂದು ಗುರುವಾಯನಕೆರೆಯ ಬಂಟರ ಭವನದಲ್ಲಿ ಬಂಟರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆಯಿತು.

ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಜಯಲಕ್ಷ್ಮಿ ಎನ್. ಸಾಮಾನಿ ಕರಂಬಾರುಬೀಡು, ಉಪಾಧ್ಯಕ್ಷರಾಗಿ ಸಂಗೀತ ಅರುಣ್ ಶೆಟ್ಟಿ ಮಡಂತ್ಯಾರು, ಕಾರ್ಯದರ್ಶಿಯಾಗಿ ಶ್ರೇಯಾ ಪುಷ್ಪರಾಜ್ ಶೆಟ್ಟಿ ಶಕ್ತಿನಗರ, ಕೋಶಾಧಿಕಾರಿಯಾಗಿ ರಕ್ಷಿತಾ ಶೆಟ್ಟಿ ಓಡಿಲ್ನಾಲ, ಜೊತೆ ಕಾರ್ಯದರ್ಶಿಯಾಗಿ ಶುಭಶ್ರೀ ಶೆಟ್ಟಿ ಉಜಿರೆ ಇವರು ಎರಡು ವರ್ಷಗಳ ಅವಧಿಗೆ ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ.

ಅದೇ ರೀತಿ ಯುವ ವಿಭಾಗದ ಅಧ್ಯಕ್ಷರಾಗಿ ಪ್ರತೀಕ್ ಶೆಟ್ಟಿ ನೊಚ್ಚ, ಉಪಾಧ್ಯಕ್ಷರಾಗಿ ಪ್ರಜ್ವಲ್ ಶೆಟ್ಟಿ ಪಾಡ್ಯಾರು. ಕಾರ್ಯದರ್ಶಿಯಾಗಿ ಪ್ರೇಮ್ ನಾಥ್ ಶೆಟ್ಟಿ ಗುಂಪಲಾಜೆ, ಪ್ರಣಮ್ ರೈ ಗರ್ಡಡಿ, ಜೊತೆ ಕಾರ್ಯದರ್ಶಿಯಾಗಿ ವಿನೋದ್ ಆಳ್ವ ಸವಾಣಾಲು ಆಯ್ಕೆಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ನಿರ್ದೇಶಕರನ್ನು ಸಹ ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಬಂಟರ ಯಾನೆ ನಾಡವರ ಸಂಘದ ಉಪಾಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ ಮತ್ತು ನವೀನ್ ಸಾಮಾನಿ ಕರಂಬಾರುಬೀಡು, ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ , ಕೋಶಾಧಿಕಾರಿ ವಸಂತ ಶೆಟ್ಟಿ ಶ್ರದ್ಧಾ, ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಜೈನ್ ಪೇಟೆ, ಮಹಿಳಾ ಘಟಕದ ಸಂಚಾಲಕಿ ಶೋಭಾ ವಿ. ಶೆಟ್ಟಿ ಉಜಿರೆ ಇವರ ಸಮ್ಮುಖದಲ್ಲಿ ನಡೆಯಿತು.

ಕಾರ್ಯಕ್ರಮದ ಪಸ್ತಾವನೆ ಪ್ರಕಾಶ್ ಶೆಟ್ಟಿ ನೊಚ್ಚ ನೆರವೇರಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಪದಾಧಿಕಾರಿಗಳು ಹಾಗೂ ಮಹಿಳಾ ವಿಭಾಗದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here