Site icon Suddi Belthangady

ಜಯನಗರ ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

ಗುರಿಪಳ್ಳ: ಬಿಲ್ಲವ ಸಮಾಜದ ಮಹಿಳೆಯರು ಸಂಘಟಿತರಾಗಿ ಬಾಳಬೇಕು ಆರ್ಥಿಕವಾಗಿ ಸದೃಢರಾಗಬೇಕೆಂಬ ಉದ್ದೇಶದಿಂದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ತಾಲೂಕಿನಾದ್ಯಂತ ಮಹಿಳೆಯರ ಸ್ವ ಸಹಾಯ ಸಂಘವನ್ನು ಆರಂಭಿಸುವ ಚಿಂತನೆಯನ್ನು ಮಾಡಿದ್ದು ಇದೀಗ ಸಂಘದ ತೀರ್ಮಾನದಂತೆ ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘವನ್ನು ಸೆ.22ರಂದು ಗುರಿಪಳ್ಳ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಗ್ರಾಮ ಸಮಿತಿಯ ಅಧ್ಯಕ್ಷ ಪ್ರಸಾದ್ ಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು.

ಸಂಘದ ನಿರ್ಣಯ ಪುಸ್ತಕ ಹಸ್ತಾಂತರಿಸಿ ಮಾತನಾಡಿದ ಬೆಳ್ತಂಗಡಿ ಯುವ ಬಿಲ್ಲವ ವೇದಿಕೆಯ ತಾಲೂಕು ಅಧ್ಯಕ್ಷ ಎಂ.ಕೆ.ಪ್ರಸಾದ್ ಸ್ವ ಸಹಾಯ ಸಂಘದ ಉದ್ದೇಶ ಹಾಗೂ ಸಂಘವು ಯಾವ ರೀತಿಯಾಗಿ ಕಾರ್ಯ ನಿರ್ವಹಿಸಬೇಕು ಎಂಬುದರ ಕುರಿತು ಮಾಹಿತಿ ನೀಡಿದರು.

ಸ್ವ ಸಹಾಯ ಸಂಘದ ಅಧ್ಯಕ್ಷರಾಗಿ ಯಶೋದಾ, ಕಾರ್ಯದರ್ಶಿಯಾಗಿ ಶಶಿಕಲಾ, ಕೋಶಾಧಿಕಾರಿಯಾಗಿ ಆಯ್ಕೆಯಾದರು. ವೇದಿಕೆಯಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕರಾದ ಗುರುರಾಜ್ ಗುರಿಪಳ್ಳ, ಯುವವಾಹಿನಿ ಸಂಚಾಲನ ಸಮಿತಿ ಗುರಿಪಳ್ಳ ಇದರ ಅಧ್ಯಕ್ಷ ಜಯರಾಮ್ ಕೊಡೆಕ್ಕಲ್ ಉಪಸ್ಥಿತರಿದ್ದರು.

ಸಭೆಯಲ್ಲಿ ಸ್ವಸಹಾಯ ಸಂಘದ ಸದಸ್ಯರಾದ ಬೇಬಿ ಉಮೇಶ್, ಸುನೀತ, ಮೋಹಿನಿ, ವಿನೋದ, ಸಾನ್ವಿ, ಹರ್ಷಿತಾ, ಜಯಂತಿ, ಹಾಗೂ ಸಮಾಜ ಬಾಂಧವರಾದ ಸುಂದರ ಪೂಜಾರಿ, ಸುರೇಶ್ ಪೂಜಾರಿ, ಶೇಖರ ಪೂಜಾರಿ ಹಾಗೂ ಆನಂದ ಪೂಜಾರಿ ಭಾಗವಹಿಸಿದ್ದರು.

Exit mobile version