ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಮಹಾಸಭೆ ಬೆಳ್ತಂಗಡಿಯ ಶ್ರೀ ಮಂಜುನಾಥ ಸ್ವಾಮಿ ಕಲಾಭವನದ ಸಭಾಭವನದಲ್ಲಿ ಸೆ.27ರಂದು ಸಂಘದ ಅಧ್ಯಕ್ಷ ವಸಂತ ಮರಕಡ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ವಕೀಲರ ಸಂಘದ ಉಪಾಧ್ಯಕ್ಷ ಅಶೋಕ್ ಕರಿಯನೆಲ ಸ್ವಾಗತಿಸಿದರು. ವಾರ್ಷಿಕ ವರದಿ ವಾಚನವನ್ನು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ. ವಾಚಿಸಿದರು.ಲೆಕ್ಕಪತ್ರವನ್ನು ವಕೀಲರ ಸಂಘದ ಕೋಶಾಧಿಕಾರಿ ಪ್ರಶಾಂತ್ ಎಂ. ಮಂಡಿಸಿದರು.

ವಕೀಲರ ಸಂಘದ ವಿವಿಧ ಕಾರ್ಯಕ್ರಮಗಳಲ್ಲಿ ಭೋಜನದ ವ್ಯವಸ್ಥೆಯನ್ನು ಏರ್ಪಡಿಸಿದ್ದ ಸಂಘದ ಸದಸ್ಯ ಶಶಿಕಿರಣ್ ಜೈನ್, ಶ್ರೀನಿವಾಸ ಗೌಡ ಬೆಳಾಲು, ಗಣೇಶ್ ಗೌಡ ಇವರನ್ನು ಗೌರವಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ.ಕೆ ಎಲ್ಲರಿಗೂ ವಂದಿಸಿದರು.

ವೇದಿಕೆಯಲ್ಲಿ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ವಕೀಲರ ಸಮಿತಿಯ ಅಧ್ಯಕ್ಷ ಅಲೋಸಿಯಸ್ ಎಸ್. ಲೋಬೊ, ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.ಉದಯ ಕುಮಾರ್ ಬಿ.ಕೆ.
ಕಾರ್ಯಕ್ರಮ ನಿರೂಪಿಸಿದರು. ಭೋಜನದ ವ್ಯವಸ್ಥೆಯನ್ನು ನೋಟರಿ ವಕೀಲ ಶ್ರೀನಿವಾಸ್ ಗೌಡ ಬೆಳಾಲು ಮಾಡಿರುತ್ತಾರೆ.

LEAVE A REPLY

Please enter your comment!
Please enter your name here